ಡಿ ಕೆ ಶಿವಕುಮಾರ್ ಕಾರ್ಯಕರ್ತರ ಶಕ್ತಿ: ಜಿ ಶ್ರೀನಾಥ್ ಬಾಬು

ಮೈಸೂರು: ಡಿ ಕೆ ಶಿವಕುಮಾರ್ ಅಭಿಮಾನಿ ಬಳಗದ ವತಿಯಿಂದ ಹಳೆ ನ್ಯಾಯಾಲಯದ ಮುಂಭಾಗ ಉದ್ಯಾನವನದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಹುಟ್ಟುಹಬ್ಬ ಆಚರಿಸಿ ಪರಿಸರ ಸಂದೇಶ ಸಾರಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಜಿ ಶ್ರೀನಾಥ್ ಬಾಬು ಅವರು ಮಾತನಾಡಿ,
ಡಿ.ಕೆ ಶಿವಕುಮಾರ ಎಂದರೆ ಕಾಂಗ್ರೆಸ್ ಕಾರ್ಯಕರ್ತರ ಒಂದು ಶಕ್ತಿ ಎಂದು ಬಣ್ಣಿಸಿದರು.

ಡಿ.ಕೆ ಶಿವಕುಮಾರ್ ಅವರು ಕೇವಲ ರಾಜಕೀಯವಾಗಿ ಅಲ್ಲದೆ ಸಾಮಾಜಿಕವಾಗಿ ಕೂಡ ಜನಸೇವೆ ಮಾಡುತ್ತಾ ಬಂದಿದ್ದಾರೆ ಎಂದು ಹೇಳಿದರು.

ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕಿಟ್ಟು ಹೋರಾಡುತ್ತಿರುವ ಸಂದರ್ಭದಲ್ಲಿ ಜನ್ಮದಿನವನ್ನು ಆಚರಣೆ ಮಾಡುವುದು ಬೇಡ ಎಂದು ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ನಾವು ಸರಳವಾಗಿ ಆಚರಿಸಿದ್ದೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಕೆಪಿಸಿಸಿ ಸದಸ್ಯ ನಜರ್ ಬಾದ್ ನಟರಾಜ್
ಡಿ ಕೆ ಶಿವಕುಮಾರ್ ಅಭಿಮಾನಿ ಬಳಗದ
ಜಿ ರಾಘವೇಂದ್ರ,ಪಂಚಾಯತ್ ರಾಜ್ ಕಾರ್ಯದರ್ಶಿ ಲೋಕೇಶ್, ದಿನೇಶ್ ಪಾಂಡುಪುರ,ಪರಿಸರ ಬಳಗದ ಕೃಷ್ಣಪ್ಪ ಗಂಟೆಯ, ಎಪಿಎಂಸಿ ರಾಮಚಂದ್ರ, ಸೇವಾದಳ ಮೋಹನ್, ಹರೀಶ್ ನಾಯ್ಡು, ರಮೇಶ ರಾಮಪ್ಪ, ಹಿನಕಲ್ ಉದಯ್,ಮತ್ತು ಡೈರಿ ವೆಂಕಟೇಶ ಉಪಸ್ಥಿತರಿದ್ದರು.