ದರ್ಶನ್‌ಗೆ ಹಾಸಿಗೆ, ದಿಂಬು:ಅ.9 ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

Spread the love

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್‌ಗೆ ಹಾಸಿಗೆ, ದಿಂಬು ನೀಡಬೇಕೆಂದು ಸಲ್ಲಿಸಿದ್ದ ಅರ್ಜಿಯ ಕುರಿತು ‌ಮಂಗಳವಾರ ವಿಚಾರಣೆ ನಡೆಸಿದ ನ್ಯಾ ಯಾಲಯ,ಈ ಕುರಿತು ಆದೇಶವನ್ನು ಅ.9ಕ್ಕೆ ಕಾಯ್ದಿರಿಸಿದೆ.

ಕನಿಷ್ಟ ಸವಲತ್ತುಗಳನ್ನು ಒದಗಿಸಲು ಕೋರ್ಟ್ ಆದೇಶವಿದ್ದರೂ ಕೂಡ ಪರಪ್ಪನ ಅಗ್ರಹಾರ ಜೈಲಧಿಕಾರಿಗಳು ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ನಟ ದರ್ಶನ್ ಪರ ವಕೀಲರು ಜೈಲಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

ಈ ಕುರಿತು 64ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಸೆ.30 ವಿಚಾರಣೆ ನಡೆಯಿತು.

ಈ ಸಂದರ್ಭದಲ್ಲಿ ಜೈಲ್ ಸೂಪರಿಂಟೆಂಡೆಂಟ್ ಸುರೇಶ್ ಕೂಡ ಹಾಜರಾಗಿದ್ದರು.

ಈ ವೇಳೆ ಎಸ್ಪಿಪಿ ಪ್ರಸನ್ನಕುಮಾರ್ ಹಾಗೂ ದರ್ಶನ್ ಪರ ವಕೀಲ ಸುನೀಲ್ ಅವರ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಅ.9ಕ್ಕೆಆದೇಶವನ್ನು ಕಾಯ್ದಿರಿಸಿದೆ.