ಮೈಸೂರು: ಕುವೆಂಪು ನಗರದಲ್ಲಿರುವ ಕರುಣೆ ಸೇವಾ ಟ್ರಸ್ಟ್ ಹಾಗೂ ಅಥರ್ವ ಲೈಫ್ ಸ್ಕಿಲ್ಸ್ ಫೌಂಡೇಶನ್ ವತಿಯಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬದ ಅಂಗವಾಗಿ ಮಕ್ಕಳಿಗೆ ಚದುರಂಗ ಪಂದ್ಯಾವಳಿ ಹಮ್ಮಿಕೊಳ್ಳಲಾಯಿತು.
30ಕ್ಕೂ ಹೆಚ್ಚು ಮಕ್ಕಳು ಸ್ಪರ್ಧಿಸಿದ್ದರು. ಸ್ಪರ್ಧೆಯಲ್ಲಿ
ಪ್ರಥಮ ಸ್ಥಾನ ಯತ್ವಿಕ್,
ದ್ವಿತೀಯ ಸ್ಥಾನ ಫೋರ್ಜಿತ್,
ತೃತೀಯ ಸ್ಥಾನ ಸಾನ್ವಿ ಮತ್ತು ವಿಪತ್ರ ಅವರಿಗೆ
ಬಹುಮಾನ ವಿತರಿಸಲಾಯಿತು.
ಸ್ಪರ್ಧಿಸಿದ ಎಲ್ಲಾ ಮಕ್ಕಳಿಗೂ ನೆನಪಿನ ಪತ್ರ ನೀಡಲಾಯಿತು.
ಈ ವೇಳೆ ಮಾತನಾಡಿದ ಕರುಣೆ ಸೇವಾ ಟ್ರಸ್ಟ್ ಅಧ್ಯಕ್ಷರಾದ ರುಕ್ಮಿಣಿ ಅವರು
ಚಿತ್ರನಟ ದರ್ಶನ ಅಭಿಮಾನಿಗಳು ಕೇವಲ ಮನರಂಜನೆಗೆ ಸೀಮಿತವಾಗದೆ ಸಾಮಾಜಿಕ ಕೆಲಸಗಳ ಮೂಲಕ ಸಹಾಯ ನೀಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಥರ್ವ ಲೈಫ್ ಸ್ಕಿಲ್ಸ್ ಫೌಂಡೇಶನ್ ಅಧ್ಯಕ್ಷರಾದ ಪುಷ್ಪಲತಾ,
ಶ್ವೇತಾ, ಮಮತಾ, ನಂದನ್ ಕುಮಾರ್, ಮತ್ತುತರರು ಹಾಜರಿದ್ದರು.
