ಬಾನು ಮುಷ್ತಾಕ್ ರಿಂದ ದಸರಾ ಉದ್ಘಾಟನೆ ಸರ್ಕಾರದ ನಿರ್ಧಾರ ಸ್ವಾಗತಾರ್ಹ:ತೇಜಸ್ವಿ

Spread the love

ಮೈಸೂರು: ಈ ಬಾರಿ ಮೈಸೂರು ದಸರಾ ಮಹೋತ್ಸವ ಉದ್ಘಾಟನೆ ಯನ್ನು ಬೂಕರ್ ಪ್ರಶಸ್ತಿ ಪಡೆದ ಕನ್ನಡದ ಮೊದಲ ಸಾಹಿತಿ ಬಾನು ಮುಷ್ತಾಕ್ ಅವರಿಂದ ಮಾಡಿಸಲು ಸರ್ಕಾರ ಕೈಗೊಂಡಿರುವ ನಿರ್ಧಾರ ಸ್ವಾಗತಾರ್ಹ ಎಂದು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ತಿಳಿಸಿದ್ದಾರೆ.

ಬೂಕರ್ ಪ್ರಶಸ್ತಿ ಪಡೆದ ಸಂದರ್ಭದಲ್ಲೇ ಈ ಬಾರಿಯ ದಸರಾ ಉತ್ಸವವನ್ನು ಬಾನು ಮುಷ್ತಾಕ್ ಅವರಿಂದ ಉದ್ಘಾಟನೆ ಮಾಡಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದೆ ಅನೇಕ ಪತ್ರಿಕೆಗಳಲ್ಲಿ ಈ ಕುರಿತು ವರದಿ ಕೂಡ ಆಗಿತ್ತು ಎಂದು ಹೇಳಿದ್ದಾರೆ.

ಈಗ ರಾಜ್ಯ ಸರ್ಕಾರ ಅಧಿಕೃತವಾಗಿ ಬಾನು ಮುಷ್ತಾಕ್ ಅವರ ಹೆಸರನ್ನು ಘೋಷಣೆ ಮಾಡಿರುವುದು ಸಂತಸ ತಂದಿದೆ ಎಂದು ತೇಜಸ್ವಿ ಹೇಳಿದ್ದಾರೆ.

ಕೆಲವರು ಬಾನು ಮುಷ್ತಾಕ್ ಅವರು ಮುಸ್ಲಿಂ ಸಮುದಾಯದ ದವರು ಅವರಿಂದ ದಸರಾ ಉದ್ಘಾಟನೆ ಮಾಡಿಸದಂತೆ ವಿರೋಧ ಮಾಡಿ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ನಮ್ಮದು ಜಾತ್ಯತೀತ ರಾಷ್ಟ್ರ ವಾಗಿದ್ದು ಸರ್ವ ಧರ್ಮದ ಶಾಂತಿಯ ತೋಟ ವಾಗಿದೆ, ಕೆಲವು ರಾಜಕಾರಣಿಗಳ ಈ ರೀತಿಯ ಹೇಳಿಕೆಗಳಿಂದ ಕೋಮು ಸೌಹಾರ್ದತೆಗೆ ದಕ್ಕೆ ಉಂಟಾಗುತ್ತದೆ ದಸರಾ ಸಂದರ್ಭದಲ್ಲಿ ಸಮಾಜದಲ್ಲಿ ಅಶಾಂತಿ ನಿರ್ಮಾಣಕ್ಕೆ ಇಂತಹಾ ಹೇಳಿಕೆ ಕಾರಣ ವಾಗಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ

ಕೂಡಲೇ ರಾಜ್ಯ ಸರ್ಕಾರ ಅಥವಾ ಪೋಲಿಸ್ ಇಲಾಖೆ ಜಾತಿ ಧರ್ಮದ ಹೆಸರಿನಲ್ಲಿ ಈ ರೀತಿಯ ಹೇಳಿಕೆ ಕೊಡುವವರಿಗೆ ತಿಳುವಳಿಕೆ ನೀಡಬೇಕು ಮೀತಿ ಮೀರಿದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಮನವಿ ಮಾಡಿದ್ದಾರೆ.