ಹೆಚ್.ಸಿ.ಮಹದೇವಪ್ಪಗೆ‌ ದಸರಾ ಉತ್ಸವಕ್ಕೆ ಆಹ್ವಾನ

Spread the love

ಮೈಸೂರು: ಮೈಸೂರು ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್.ಸಿ. ಮಹದೇವಪ್ಪ ಅವರಿಗೆ ನಾಡಹಬ್ಬ ದಸರಾ ಮಹೋತ್ಸವಕ್ಕೆ ಅಧಿಕೃತ ಆಹ್ವಾನ ನೀಡಲಾಯಿತು.

ಬೆಂಗಳೂರಿನಲ್ಲಿರು ಮಹದೇವಪ್ಪ ಅವರ ಸ್ವಗೃಹಕ್ಕೆ ತೆರಳಿ ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ ರೆಡ್ಡಿ ಅವರು ಮೈಸೂರು ದಸರಾಗೆ ಅಧಿಕೃತವಾಗಿ ಆಮಂತ್ರಣ ನೀಡಿದರು.

ಈ ವೇಳೆ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ಅಪರ ಜಿಲ್ಲಾಧಿಕಾರಿ ಡಾ ಪಿ. ಶಿವರಾಜು ಹಾಗೂ ಸ್ವಾಗತ ಸಮಿತಿಯ ಅಧಿಕಾರಿಗಳು ಉಪಸ್ಥಿತರಿದ್ದರು.