ಮೈಸೂರು: ಚಾಮುಂಡಿಪುರಂನ ಶ್ರೀರಾಮ ಗೆಳೆಯರ ಬಳಗದ ಅಧ್ಯಕ್ಷರಾದ ಸಿ. ಸಂದೀಪ್ ಅವರು ವಾರ್ಡ್ ನಂ 55 ರ ತಗಡೂರು ರಾಮಚಂದ್ರ ರಾವ್ ಉದ್ಯಾನವನದಲ್ಲಿ, ಪೌರಕಾರ್ಮಿಕರಿಗೆ ದೀಪಗಳನ್ನು ವಿತರಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಿದರು.
ಈ ವೇಳೆ ಮಾತನಾಡಿದ ಅವರು,ಯಾವ ಹಬ್ಬವಿದ್ದರೂ ಕೂಡ ನಮ್ಮ ಪೌರಕಾರ್ಮಿಕರು ಮೊದಲು ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಾರೆ ಎಂದು ಹೇಳಿದರು.
ಅವರು ನಗರವನ್ನು ಸ್ವಚ್ಛಗೊಳಿಸಿ, ಹಬ್ಬದ ವಾತಾವರಣ ಸೃಷ್ಟಿಸಿದ ನಂತರವೇ ತಮ್ಮ ಮನೆಯಲ್ಲಿ ಹಬ್ಬ ಆಚರಿಸುತ್ತಾರೆ. ಅವರು ತಮ್ಮ ಕೆಲಸದಲ್ಲಿಯೇ ದೇವರನ್ನು ಕಾಣುತ್ತಾರೆ. ಇಂತಹ ನಿಸ್ವಾರ್ಥ ಸೇವಕರೊಂದಿಗೆ ದೀಪಾವಳಿ ಹಬ್ಬ ಆಚರಣೆ ಮಾಡಿದ್ದು ನಮಗೆ ಸಂತಸ ತಂದಿದೆ ಎಂದು ತಿಳಿಸಿದರು.
ಈ ವಿನೂತನ ಕಾರ್ಯಕ್ರಮಕ್ಕೆ ಶ್ರೀರಾಮ ಗೆಳೆಯರ ಬಳಗದ ಸದಸ್ಯರಾದ ಭಾನುಕುಮಾರ್, ಮಧುಸೂಧನ್, ಪಾರ್ವತಿ, ಸುರೇಶ್ ಸಾಥ್ ನೀಡಿದರು.