ಮೈಸೂರು: ಮೈಸೂರಿನ ದೇವರಾಜ ಪೊಲೀಸ್ ಠಾಣೆಯ ನಿರೀಕ್ಷಕರಾಗಿ ಕೆ.ಆರ್.ರಘು ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
ರಘು ಅವರು ಈ ಹಿಂದೆ ಮಂಗಳೂರಿನ ಬರ್ಕೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಅಲ್ಲದೆ ಮೈಸೂರಿನ ಮಂಡಿ ಪೊಲೀಸ್ ಠಾಣೆಯಲ್ಲೂ ಸಹ ಕರ್ತವ್ಯ ನಿರ್ವಹಿಸಿದ್ದರು,ಹಾಗಾಗಿ ಅವರಿಗೆ ಮೈಸೂರು ಹೊಸತೇನಲ್ಲ.ಇಲ್ಲಿನ ಆಗು ಹೋಗುಗಳ ಬಗ್ಗೆ ಚೆನ್ನಾಗಿ ಅರಿವಿದೆ.
ಹಾಲಿ ನಿರೀಕ್ಷಕರಾಗಿದ್ದ ಟಿ.ಬಿ.ಶಿವಕುಮಾರ್ ಅವರಿಗೆ ಇನ್ನೂ ಯಾವುದೇ ಸ್ಥಾನ ಸೂಚಿಸಿಲ್ಲ.