ಡಿ.ಕೆ ಶಿ ಸಿಎಂ ಆಗುವಂತೆ ಬೆಟ್ಟದಲ್ಲಿ ಬೆಳ್ಳಿರಥ ಎಳೆದು ಅಭಿಮಾನಿಗಳ ವಿಶೇಷ ಸೇವೆ

ಮೈಸೂರು: ಡಿ.ಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಯಾಗಬೇಕೆಂದು ಹಾರೈಸಿ, ಡಿ.ಕೆ ಶಿವಕುಮಾರ್ ಅಭಿಮಾನಿ ಬಳಗದವರು ಚಾಮುಂಡಿ ಬೆಟ್ಟದಲ್ಲಿ ಬೆಳ್ಳಿರಥ ಎಳೆದು ವಿಶೇಷ ಸೇವೆ ಸಲ್ಲಿಸಿದರು.

ಅಭಿಮಾನಿಗಳು ಡಿ.ಕೆ ಶಿವಕುಮಾರ್ ಅವರ ಭಾವಚಿತ್ರವನ್ನು ರಥದ ಮುಂಭಾಗದಲ್ಲಿ ಇರಿಸಿ, ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಕೆಪಿಸಿಸಿ ಸದಸ್ಯ ಜಿ. ಶ್ರೀನಾಥ್ ಬಾಬು ಅವರು,ರಾಜ್ಯದಲ್ಲಿ
ಡಿ.ಕೆ. ಶಿವಕುಮಾರ್ ಅವರ ಆಡಳಿತ ವೈಖರಿ, ಅಭಿವೃದ್ಧಿ ದೃಷ್ಟಿಕೋನ ಮತ್ತು ಜನಪರ ಕೆಲಸಗಳು ಅವರನ್ನು ಪರಿಣಾಮಕಾರಿ ನಾಯಕನನ್ನಾಗಿ ಬಿಂಬಿಸಿವೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 136 ಸ್ಥಾನಗಳಿಂದ ಗೆಲ್ಲಲು ಅವರ ಪರಿಶ್ರಮ ಮಹತ್ತರ ಪಾತ್ರ ವಹಿಸಿದೆ ಎಂದು ತಿಳಿಸಿದರು.

ಪ್ರಸ್ತುತ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿವೆ. ಹೈಕಮಾಂಡ್ ಸಿಎಂ ಬದಲಾವಣೆ ಕುರಿತು ಯಾವುದೇ ನಿರ್ಧಾರ ತೆಗೆದುಕೊಂಡಲ್ಲಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನೇ ಮುಖ್ಯಮಂತ್ರಿಯಾಗಿ ನೇಮಿಸಬೇಕು. ಸಿದ್ದರಾಮಯ್ಯ ಅವರು ಸರ್ಕಾರವನ್ನು ಉತ್ತಮವಾಗಿ ಮುನ್ನಡೆಸುತ್ತಿದ್ದಾರೆ, ಆದರೆ ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಆಗುವ ಅವಕಾಶ ನೀಡಬೇಕೆಂಬುದು ನಮ್ಮ ಮನವಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿ ಬಳಗದ ಜಿ. ರಾಘವೇಂದ್ರ,ಹರೀಶ್ ಗೌಡ, ಎಸ್.ಎನ್. ರಾಜೇಶ್, ಶಶಾಂಕ್ ಗೌಡ, ಚಂದ್ರು, ಕಿರಣ್, ಪ್ರಸನ್ನ ಕುಮಾರ್ (ಅಪ್ಪಿ), ದಿನೇಶ್, ವಿನೋದ್, ಮ್ಯಾತ್ಯುಸ್, ಹರೀಶ್ ನಾಯ್ಡು, ಶೈಲಾ, ಶೋಭಾ ರಾವ್, ಸುಜಾತ ಭಟ್, ಆಶಾ, ಸುಂದರಿ, ರವಿ ಕಲಾ, ಸಂಗೀತಾ, ದೀಪ ಸೇರಿದಂತೆ ಅಭಿಮಾನಿಗಳು ಪಾಲಗೊಂಡಿದ್ದರು.