ಮೈಸೂರು: ಮಲೆ ಮಾದೇಶ್ವರ ಸಂಸ್ಥೆ ವತಿಯಿಂದ ಸಿದ್ದಾರ್ಥ ಲೇಔಟ್ ನಲ್ಲಿರುವ ವೈಶಾಲಿ ಕಾನ್ವೆಂಟ್ ಮೈದಾನದಲ್ಲಿ ಸೆಪ್ಟೆಂಬರ್ 16ರ ಸಂಜೆ 5 ಗಂಟೆಗೆ ಶ್ವಾನಗಳ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.
ಪ್ರದರ್ಶನದ ಪ್ರಚಾರ ಸಾಮಗ್ರಿಗಳನ್ನು ನಗರ ಪಾಲಿಕೆಯಲ್ಲಿರುವ ಶಾಸಕರ ಕಚೇರಿಯಲ್ಲಿ ಶಾಸಕ ಟಿ ಎಸ್ ಶ್ರೀವತ್ಸ ಬಿಡುಗಡೆ ಮಾಡಿದರು.
ಈ ವೇಳೆ ಮಾತನಾಡಿದ ಅವರು ಬದುಕಿನ ಭದ್ರತೆ ಜೊತೆಗೆ ನಿಷ್ಠೆ, ಸ್ನೇಹಕ್ಕೆ ಶ್ವಾನಗಳು ಹೆಸರುವಾಸಿಯಾಗಿವೆ ಎಂದು ಬಣ್ಣಿಸಿದರು.
ಮಾನವ ಸಹೋದ್ಯೋಗಿಗಳು ಮತ್ತು ಬಂಧುಗಳೊಂದಿಗೆ ಸ್ನೇಹ ಭಾವನೆಯನ್ನು ತೊರೆಯುತ್ತಿದ್ದಾನೆ. ನಾಯಿಗಳು ಜೀವನ ಸಂಗಾತಿಯ ಸ್ನೇಹವನ್ನು ನೀಡುವುದರ ಜೊತೆಗೆ ಬದುಕಿಗೆ ಭದ್ರತೆ ನೀಡುತ್ತವೆ ಎಂದು ತಿಳಿಸಿದರು.
ಮಲೆ ಮಾದೇಶ್ವರ ಸಂಸ್ಥೆಯ ಅಧ್ಯಕ್ಷರಾದ ಮಹಾನ್ ಅಚ್ಚು ಮಾತನಾಡಿ ನೊಂದಣಿ ಶುಲ್ಕ 500 ರೂಪಾಯಿ ಇರುತ್ತದೆ, ವಿಜೇತರಿಗೆ 3 ಅತ್ಯುತ್ತಮ ಟ್ರೋಫಿ ಹಾಗು ಪ್ರಮಾಣ ಪತ್ರ ಹಾಗೂ ಸ್ಪರ್ಧಿಸಿದ ಎಲ್ಲಾ ಶ್ವಾನಗಳಿಗೆ ಪದಕ ಹಾಗೂ ಪ್ರಮಾಣ ಪತ್ರ ನೀಡಲಾಗುವುದು ಎಂದು ಹೇಳಿದರು.
ಹೆಸರು ನೊಂದಾವಣಿಗೆ 7829340020 ಮೊಬೈಲ್ ನಂಬರ್ ಸಂಪರ್ಕಿಸಿ
ಬಿಜೆಪಿ ಯುವ ಮೋರ್ಚಾ ನಗರ ಪ್ರಧಾನ ಕಾರ್ಯದರ್ಶಿ ಲೋಹಿತ್, ನಾಗರಾಜ್, ಮೋಹನ್, ಕಿಶೋರ್ ಮತ್ತಿತರರು ಹಾಜರಿದ್ದರು.