ಡಾ.ಎಚ್. ಸಿ.ಎಂ ಆಪ್ತ ಸಹಾಯಕ ಶ್ರೀನಿವಾಸ್ ಅವರ ಜನುಮದಿನ

ಮೈಸೂರು: ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಸಚಿವರಾದ ಡಾ. ಎಚ್. ಸಿ. ಮಹದೇವಪ್ಪ ನವರ ಆಪ್ತ ಸಹಾಯಕರಾದ ಶ್ರೀನಿವಾಸ್ ಅವರಿಗೆ ಹುಟ್ಟು ಹಬ್ಬದ ಸಂಭ್ರಮ.

ಹಾಗಾಗಿ ಶ್ರೀನಿವಾಸ್ ಅವರಿಗೆ ಮೈಸೂರು ಪೇಟ ತೊಡಿಸಿ ಶಾಲು ಹೊದಿಸಿ,ಹಾರ ಹಾಕಿ ಸನ್ಮಾನಿಸಿ ಹುಟ್ಟು ಹಬ್ಬದ ಶುಭ ಕೋರಲಾಯಿತು.

ಚಾಮುಂಡೇಶ್ವರಿ ಕ್ಷೇತ್ರದ ಕೆಪಿಸಿಸಿ ಸದಸ್ಯ ನಜರ್ ಬಾದ್ ನಟರಾಜ್, ಮೈಸೂರು ಜಿಲ್ಲಾ ಪರಿಶಿಷ್ಟ ಜಾತಿ ವಿಭಾಗದ ಕಾರ್ಯದರ್ಶಿ ಪ್ರಕಾಶ್ ಮತ್ತು ದೇವಯ್ಯ ಲಿಂಗಾಬುದ್ಧಿಪಾಳ್ಯ ಅವರುಗಳು ಶ್ರೀನಿವಾಸ್ ಅವರಿಗೆ ಜನುಮದಿನದ ಶುಭ ಹಾರಿಸಿದರು.