ಮೈಸೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಪೂಜ್ಯ ಡಾ. ವೀರೇಂದ್ರ ಹೆಗಡೆ ಅವರ 77ನೇ ಜನ್ಮದಿನೋತ್ಸವವನ್ನು ಕೆಎಂಪಿಕೆ ಟ್ರಸ್ಟ್ ಹಾಗೂ ಡಾ ವೀರೇಂದ್ರ ಹೆಗಡೆ ಅಭಿಮಾನಿ ಬಳಗ ವಿಶೇಷವಾಗಿ ಆಚರಿಸಿದವು.
ಚಾಮುಂಡಿಪುರಂ ವೃತ್ತ, ತಗಡೂರು ರಾಮಚಂದ್ರರಾವ್ ಉದ್ಯಾನವನದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ ಜನುಮ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ವೇಳೆ ಕೆಎಂಪಿಕೆ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ಮಾತನಾಡಿ
ಐವತ್ತು ವರ್ಷಗಳಿಗೂ ಹೆಚ್ಚು ಕಾಲದಿಂದ ಧರ್ಮಸ್ಥಳ ಶ್ರೀ ಕ್ಷೇತ್ರದಲ್ಲಿ ಧರ್ಮಾಧಿಕಾರಿಯಾಗಿರುವ ಡಾ. ಡಿ ವೀರೇಂದ್ರ ಹೆಗ್ಗಡೆ ಅವರು ತಮ್ಮ ಭಕ್ತಿ, ಧರ್ಮಸೇವೆ ಮತ್ತು ಸಮಾಜಸೇವೆಗಳಿಂದ ಜನಜನಿತವಾಗಿದ್ದಾರೆ. ಶ್ರೀ ಕ್ಷೇತ್ರಕ್ಕೆ ಭವ್ಯ ಕಳೆ ಮತ್ತು ಗೌರವ ತಂದುಕೊಟ್ಟ ಕೀರ್ತಿ ಅವರದ್ದು ಎಂದು ಬಣ್ಣಿಸಿದರು.
ಧರ್ಮಸ್ಥಳದ ಮಂಜುನಾಥನ ದರ್ಶನ ಮಾಡದ ಕನ್ನಡಿಗರು ಯಾರೂ ಇಲ್ಲ ಎಂದರೆ ಅತಿಶಯೋಕ್ತಿ ಎನಿಸಲಾರದು. ಬಹುತೇಕ ಭಕ್ತರಿಗೆ ಧರ್ಮಸ್ಥಳದ ಮಂಜುನಾಥ ಎಂದರೆ ಗಾಢವಾದ ಭಕ್ತಿ ಮತ್ತು ನಂಬಿಕೆ ಇದೆ. ಹಾಗೆಯೇ ಧರ್ಮಾಧಿಕಾರಿ ವೀರಂದ್ರ ಹೆಗ್ಗಡೆ ಅಂದರೂ ಅಷ್ಟೇ ಗೌರವವಿದೆ ಎಂದು ಹೇಳಿದರು.
ಹೆಗಡೆ ಅವರು ಸಮುದಾಯ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ, ಆರೋಗ್ಯ, ಶಿಕ್ಷಣ ಮತ್ತು ಸಂಸ್ಕೃತಿ ಕ್ಷೇತ್ರದಲ್ಲಿ ಅವರು ಮಾಡುತ್ತಿರುವ ಕಾರ್ಯಗಳು ಶ್ರೇಷ್ಠ ಎಂದು ಬಣ್ಣಿಸಿದರು.
ಜನ್ಮದಿನೋತ್ಸವ ಆಚರಣೆ ವೇಳೆ ನಿರೂಪಕ ಅಜಯ್ ಶಾಸ್ತ್ರಿ, ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದ ಅಧ್ಯಕ್ಷರಾದ ಸಿ ಎಸ್ ಚಂದ್ರಶೇಖರ್,ಎಸ್ ಎನ್ ರಾಜೇಶ್,ಎಸ್.ಬಿ ವಾಸುದೇವಮೂರ್ತಿ, ಧರ್ಮೇಂದ್ರ, ಆನಂದ, ಪ್ರಮೋದ್ ಆಚಾರ್, ಶುಚಿಂದ್ರ, ರಾಮಚಂದ್ರು,ಜತ್ತಿ ಪ್ರಸಾದ್,ಅಪೂರ್ವ ಸುರೇಶ್,ರವಿಶಂಕರ್ ಮತ್ತಿತರರು ಹಾಜರಿದ್ದರು.
