ಕೊಳ್ಳೇಗಾಲ: ಕುಡಿದ ಮತ್ತಿನಲ್ಲಿ ಇಬ್ಬರ ನಡುವೆ ಜಗಳ ನಡೆದು ಒಬ್ಬನ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ನಡೆದಿದೆ.
ಕುಣಗಳ್ಳಿಯ ರಾಮಕೃಷ್ಣ ಕೊಲೆಯಾದ ವ್ಯಕ್ತಿ, ಜೆಸಿಬಿ ಚಾಲಕ ಮಲ್ಲಿಕಾರ್ಜುನ ಕೊಲೆ ಮಾಡಿದ ಆರೋಪಿ.
ಭಾನುವಾರ ರಾತ್ರಿ ಕುಡಿದ ಅಮಲಿನಲ್ಲಿ ಇಬ್ಬರ ನಡುವೆ ಜಗಳವಾಗಿ ಜೊತೆಯಲ್ಲಿದ್ದ ರಾಮಕೃಷ್ಣನ ಮೇಲೆ ಮಲ್ಲಿಕಾರ್ಜುನ ರಾಡಿನಿಂದ ಹೊಡೆದು ಕೊಲೆ ಮಾಡಿ ನಂತರ ಪೊಲೀಸರಿಗೆ ಶರಣಾಗಿದ್ದಾನೆ.
ಅಗರ ಮಾಂಬಳ್ಳಿ ಪೊಲೀಸರು ಸ್ಥಳ ಮಹಜರ್ ನಡೆಸಿದ್ದಾರೆ. ಎಸ್ಪಿ ಮುತ್ತುರಾಜ್ ಸ್ಥಳಕ್ಕೆ ಆಗಮಿಸಿ ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಹಳೇ ವೈಷಮ್ಯದಿಂದ ಕೊಲೆ ಮಾಡಿರುವುದಾಗಿ ಆತ ತಪ್ಪೊಪ್ಪಿಕೊಂಡಿದ್ದಾನೆ.
ಈ ಸಂಬಂಧ ಅಗರ ಮಾಂಬಳ್ಳಿ ಪೊಲೀಸರು ಪ್ರಕರಣ ದಾಖಲಿಸಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
