ಚಿಕ್ಕಮಗಳೂರು: ಅರಣ್ಯ ಸಚಿವರಿಗೆ ಮಲೆನಾಡು ಭಾಗಕ್ಕೂ, ಬಯಲು ಸೀಮೆಗೂ ಇರೋ ವ್ಯತ್ಯಾಸವೇ ಗೊತ್ತಿಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟೀಕಿಸಿದರು.
ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆ ಸಾವು ಖಂಡಿಸಿ ಬಾಳೆಹೊನ್ನೂರು ಉಪ ವಿಭಾಗ ವಲಯ ಅರಣ್ಯಾಧಿಕಾರಿಗಳ ಕಚೇರಿ ಬಳಿ ಮಳೆಯಲ್ಲೂ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ನಿರಂತರವಾಗಿ ಈ ಭಾಗದಲ್ಲಿ ಇಂತಹ ಘಟನೆಗಳು ಮರುಕಳಿಸುತ್ತಿವೆ ಇದಕ್ಕೆ ಶಾಶ್ವತವಾಗಿ ಪರಿಹಾರ ಒದಗಿಸಬೇಕೆಂದು ನಿಖಿಲ್ ಒತ್ತಾಯಿಸಿದರು.
ಅರಣ್ಯ ಸಚಿವ ಈಶ್ವರ್ ಖಂಡ್ರೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ನಿಖಿಲ್,
ಕೂಡಲೇ ಅರಣ್ಯ ಸಚಿವರು ಸ್ಥಳಕ್ಕಾಗಮಿಸಿ ಪರಿಶೀಲನೆ ಮಾಡಬೇಕು ಬೇಕೆಂದು ಆಗ್ರಹಿಸಿದರು.
ನಿರಂತರವಾಗಿ ಈ ಭಾಗದ ರೈತರು ಆನೆದಾಳಿಯಿಂದ ಸಮಸ್ಯೆ ಎದುರಿಸುತ್ತಿದ್ದಾರೆ.ಕೂಡಲೇ ಕಾಡನೆಯನ್ನ ಹಿಡಿದು ಆನೆ ಶಿಬಿರಕ್ಕೆ ಬಿಡಬೇಕು,
ಮೃತಪಟ್ಟ ಕುಟುಂಬಗಳಿಗೆ ಸರ್ಕಾರ ಪರಿಹಾರ ಘೋಷಿಸಬೇಕು ಇಲ್ಲಿನ ಅರಣ್ಯ ಅಧಿಕಾರಿಗಳು ಹಾಗೂ ಸರ್ವ ಪಕ್ಷದ ಮುಖಂಡರ ಜೊತೆ ಸಭೆ ನಡೆಸಬೇಕು ಎಂದು ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದರು.
ಈ ಭಾಗದಲ್ಲಿ ಕಾಡನೆ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡಬೇಕು,ಇಲ್ಲದಿದ್ದಲ್ಲಿ ಈ ಹೋರಾಟವನ್ನು ದೊಡ್ಡ ಮಟ್ಟದಲ್ಲಿ ನಡೆಸುತ್ತೇವೆ. ಇದನ್ನ ವಿಧಾನಮಂಡಲದಲ್ಲೂ ಸರ್ಕಾರದ ಗಮನ ಸೆಳೆಯುತ್ತೇವೆ ಎಂದು ಅವರು ಹೇಳಿದರು.
ಈ ವೇಳೆ ಚಿಕ್ಕಮಗಳೂರು ಜಿಲ್ಲಾಧ್ಯಕ್ಷರಾದ ರಂಜನ್ ಅಜಿತ್ ಕುಮಾರ್, ರಾಜ್ಯ ಉಪಾಧ್ಯಕ್ಷರಾದ ಸುಧಾಕರ್ ಶೆಟ್ಟಿ , ಮುಖಂಡರಾದ ವಿನಯ್ ಕಣಿವೆ, ಕೊಪ್ಪ, ಎನ್.ಆರ್. ಪುರ ಕ್ಷೇತ್ರದ ಮುಖಂಡರು ಹಾಜರಿದ್ದರು.