ಸುಳ್ಳು ಸುದ್ದಿ ತಡೆಗೆ ಕಾನೂನು ರೂಪಿಸಲುಹೊರಟ ಸರ್ಕಾರ: ಅಶೋಕ್ ಗೇಲಿ

Spread the love

ಬೆಂಗಳೂರು: ಸುಳ್ಳು ಸುದ್ದಿ ಹರಡುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸುಳ್ಳು ಸುದ್ದಿ ತಡೆಗೆ ಕಾನೂನು ರೂಪಿಸಲು ಹೊರಟಿರುವುದು ಈ ಶತಮಾನದ ಅತ್ಯಂತ ದೊಡ್ಡ ವಿಪರ್ಯಾಸ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರೇ, ರಾಜ್ಯದಲ್ಲಿ ಸಂಭವಿಸುತ್ತಿರುವ ಹಾರ್ಟ್ ಅಟ್ಯಾಕ್ ಗಳಿಗೆ ಕೋವಿಡ್ ಲಸಿಕೆ ಕಾರಣವಲ್ಲ ಎಂದು ತಜ್ಞರ ವರದಿ ಸ್ಪಷ್ಟಪಡಿಸಿದೆ.

ಹಾರ್ಟ್ ಅಟ್ಯಾಕ್ ಗಳಿಗೆ ಕೋವಿಡ್ ಲಸಿಕೆಗೆ ತರಾತುರಿಯಲ್ಲಿ ಅನುಮೋದನೆ ನೀಡಿ ಲಸಿಕೆ ಕೊಟ್ಟಿದ್ದೇ ಕಾರಣ ಎಂದು ಸುಳ್ಳು ಸುದ್ದಿ ಹರಡಿದ ಸಿಎಂ ಸಿದ್ದರಾಮಯ್ಯನವರ ಮೇಲೆ ಸುಳ್ಳು ಸುದ್ದಿ ಕೇಸು ಹಾಕುವಿರಾ ಎಂದು ಟ್ವೀಟ್ ಮಾಡಿ ಅಶೋಕ್ ಪ್ರಶ್ನಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿಗಳೇ ಸುಳ್ಳು ಸುದ್ದಿ ಹರಡುವ ಬ್ರ್ಯಾಂಡ್ ಅಂಬಾಸಿಡರ್ ಆಗಿರುವುದು ಕರ್ನಾಟಕದ ದುರಂತ.ಸಿದ್ದರಾಮಯ್ಯ ಅವರ ನಿವೃತ್ತಿ ಸಮಯ ಹತ್ತಿರ ಬಂದಿದೆ ಎನ್ನುವುದಕ್ಕೆ ಕಾಂಗ್ರೆಸ್ ಹೈಕಮಾಂಡ್ ರಚನೆ ಮಾಡಿರುವ ಎಐಸಿಸಿ ಒಬಿಸಿ ರಾಷ್ಟ್ರೀಯ ಸಲಹಾ ಮಂಡಳಿ ಎಂಬ ಪುನರ್ವಸತಿ ಕೇಂದ್ರವೇ ಸಾಕ್ಷಿ ಎಂದು ಅಶೋಕ್ ಜರಿದಿದ್ದಾರೆ‌

ಸಿದ್ದರಾಮಯ್ಯನವರೇ, ನಿಮ್ಮ ಸೇವೆ ಸಾಕು, ರಾಜೀನಾಮೆ ಕೊಟ್ಟು ನಿವೃತ್ತರಾಗಿ ಎಂದು ಶ್ರೀಮತಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ಪರೋಕ್ಷವಾಗಿ ಹೇಳುತ್ತಿದ್ದಾರೆ. ಇನ್ನೆಷ್ಟು ದಿನ ಸ್ವಾಮಿ ಈ ಭಂಡ ಬಾಳು. ಈ ರಬ್ಬರ್ ಸ್ಟ್ಯಾಂಪ್ ಕುರ್ಚಿ ಇದ್ದರೆಷ್ಟು, ಬಿಟ್ಟರೆಷ್ಟು. ನಿಮಗೆ ಕಿಂಚಿತ್ತಾದರೂ ಸ್ವಾಭಿಮಾನ ಇದ್ದಿದ್ದರೆ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರೆಯುತ್ತಿರಲಿಲ್ಲ ಎಂದು
ಅಶೋಕ್ ಟೀಕಾಪ್ರಹಾರ ಮಾಡಿದ್ದಾರೆ.