ಮೈಸೂರು: ಮೈಸೂರಿನ ಕೆ ಎಂ ಪಿ ಕೆ ಟ್ರಸ್ಟ್ ವತಿಯಿಂದ ಫೆ.14 ರಂದು ಉಚಿತ ಸಾಮೂಹಿಕ ಅಕ್ಷರಭ್ಯಾಸ ಹಮ್ಮಿಕೊಂಡಿದ್ದು ಇದರ ಪೋಸ್ಟರ್ ಅನ್ನು ಮಾಜಿ ಸಂಸದ ಪ್ರತಾಪ್ ಸಿಂಹ ಬಿಡುಗಡೆಗೊಳಿಸಿದರು.
ಕಾರ್ಯಕ್ರಮ ವಿಶ್ವೇಶ್ವರ ನಗರ,ಇಂಡಸ್ಟ್ರಿಯಲ್ ಸಬರ್ಬ್,
ಮಹರ್ಷಿ ಪಬ್ಲಿಕ್ ಶಾಲೆಯಲ್ಲಿ ಉಚಿತ ಸಾಮೂಹಿಕ ಅಕ್ಷರಭ್ಯಾಸ ಹಾಗೂ ಸರಸ್ವತಿ ಪೂಜೆ ಏರ್ಡಿಸಲಾಗಿದೆ.
ಪೋಸ್ಟರ್ ಬಿಡುಗಡೆ ಮಾಡಿ ಶುಭ ಹಾರೈಸಿ ಮಾತನಾಡಿದ ಪ್ರತಾಪ್ ಸಿಂಹ, ಮಗುವಿಗೆ ಮಾತನಾಡುವ ಭಾಷೆ ಮತ್ತು ವಿದ್ಯೆ ಕಲಿಸುವ ಪ್ರಾರಂಭ ಹಂತ ಅಕ್ಷರಾಭ್ಯಾಸ. ಇದನ್ನು ಕೊಡುಸುವುದು ಪೋಷಕರ ಮೂಲ ಕರ್ತವ್ಯ ಎಂದು ಹೇಳಿದರು.
ಮಕ್ಕಳಿಗೆ ಮನೆಯೇ ಮೊದಲ ಪಾಠ ಶಾಲೆಯಾಗಿದ್ದು, ತಾಯಿಯೇ ಮೊದಲ ಗುರು, ಮಗುವಿಗೆ ಅಕ್ಷರಭ್ಯಾಸ ಎನ್ನುವುದು ಜ್ಞಾನ ದೇಗುಲದ ಪ್ರಮುಖ ಘಟ್ಟ. ಅಕ್ಷರಾಭ್ಯಾಸದಲ್ಲಿ ಹೆಚ್ಚು ಮಕ್ಕಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು
ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ಮಾತನಾಡಿ,ಎಲ್ಲಾ ಜನಾಂಗದವರಿಗೂ ಉಚಿತ ಸಾಮೂಹಿಕ ಅಕ್ಷರಭ್ಯಾಸ ಹಾಗೂ ಸರಸ್ವತಿ ಪೂಜೆ ಫೆ.14.ರ ಬುಧವಾರ ಬೆಳಗ್ಗೆ 8 ರಿಂದ 10.30 ರವರಿಗೂ ಮಹರ್ಷಿ ಪಬ್ಲಿಕ್ ಶಾಲೆಯಲ್ಲಿ ನಡೆಯಲಿದೆ.ಅಕ್ಷರಭ್ಯಾಸನವನ್ನು ಮಾಡಲಿಚ್ಚಿಸುವ ಮಕ್ಕಳ ಪೋಷಕರು ದೂರವಾಣಿ 9880752727/7829067769 ನೋಂದಾಯಿಸಿಕೊಳ್ಳಬೇಕೆಂದು ಮನವಿ ಮಾಡಿದರು.
ಅಕ್ಷರಭ್ಯಾಸ ಮಾಡಿಸುವವರಿಗೆ ಸ್ಲೇಟ್ (ಪ್ಲೇಟ್)-ಬಳಪ ನಮ್ಮ ಟ್ರಸ್ಟ್ ವತಿಯಿಂದ ಉಚಿತವಾಗಿ ಪ್ರಸಾದ ರೂಪದಲ್ಲಿ ನೀಡಲಾಗುವುದು, ಪ್ರತ್ಯೇಕವಾಗಿ ತರುವ ಅಗತ್ಯವಿರುವುದಿಲ್ಲ. 13ರಂದು ನೋಂದಣಿಗೆ ಕಡೆಯ ದಿನವಾಗಿದೆ ಎಂದು ತಿಳಿಸಿದರು
ಈ ಸಂದರ್ಭದಲ್ಲಿ
ಮಹರ್ಷಿ ಪಬ್ಲಿಕ್ ಶಾಲೆಯ ಸಿಇಒ ತೇಜಸ್ ಶಂಕರ್, ಬಿಜೆಪಿ ಮುಖಂಡರಾದ ಆರ್ ಪರಮೇಶ್ ಗೌಡ ಮತ್ತಿತರರು ಹಾಜರಿದ್ದರು.