ಮೈಸೂರು: ತಾಯಂದಿರನ್ನೆಲ್ಲಾ ತೊಡಗಿಸಿಕೊಂಡು ನಡೆಸಿಕೊಂಡು ಬರುವಂತಹ ಅತಿ ದೊಡ್ಡ ಹಬ್ಬ ಶ್ರೀ ವರಮಹಾಲಕ್ಷ್ಮಿ ವ್ರತ ಎಂದು ಮೂಡ ಮಾಜಿ ಸದಸ್ಯರಾದ ಲಕ್ಷ್ಮೀದೇವಿ ಹೇಳಿದರು.
ಹಿಂದೂ ಧರ್ಮ ಉಳಿಯಬೇಕೆಂದರೆ ಇಂತಹ ಹಬ್ಬಗಳು ಎಲ್ಲಾ ಕಡೆಗಳಲ್ಲಿ ಒಟ್ಟುಗೂಡಿ ನಡೆಸಲ್ಪಡುವುದು ಅತಿ ಮುಖ್ಯವಾಗಿದೆ ಎಂದು ತಿಳಿಸಿದರು
ತ್ಯಾಗರಾಜ ರಸ್ತೆಯಲ್ಲಿರುವ ಅಕ್ಕನ ಬಳಗ ಶಾಲೆಯಲ್ಲಿ ಶ್ರೀ ದುರ್ಗಾ ಫೌಂಡೇಶನ್ ಶ್ರೀ ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ಹಮ್ಮಿಕೊಂಡಿದ್ದ ವರಮಹಾಲಕ್ಷ್ಮಿ ಜೊತೆ ಫೋಟೋ ಆನ್ಲೈನ್ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.
ಮಕ್ಕಳಿಗೆ ಆಸ್ತಿಯನ್ನು ಮಾಡದೆ ಮಕ್ಕಳನ್ನೇ ಆಸ್ತಿ ಮಾಡಬೇಕು,ಅಲ್ಲದೆ ನಮ್ಮ ಧರ್ಮದ
ಜಾಗೃತಿಯನ್ನು ಎಲ್ಲರಲ್ಲೂ ಮೂಡಿಸಬೇಕು ಎಂದು ತಿಳಿಸಿದರು
ಮಂದಿನ ಪೀಳಿಗೆಯ ಮಕ್ಕಳನ್ನು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಪ್ರೇರೇಪಿಸಬೇಕು,ಈ ಮೂಲಕ ಹಿಂದೂ ಸನಾತನ ಸಂಸ್ಕೃತಿ ರಕ್ಷಿಸಬೇಕು ಎಂದು ಲಕ್ಷ್ಮೀದೇವಿ ಕರೆ ನೀಡಿದರು.
ಆನ್ಲೈನ್ ಮೂಲಕ 500ಕ್ಕೂ ಹೆಚ್ಚು ಸ್ಪರ್ಧಿಗಳು ತಮ್ಮ ತಮ್ಮ ಮನೆಯಲ್ಲಿ ಅಲಂಕರಿಸಿ ಕೂರಿಸಿದ ಶ್ರೀ ವರಮಹಾಲಕ್ಷ್ಮಿ ಜೊತೆ ಫೋಟೋವನ್ನು ಆನ್ಲೈನ್ ಮೂಲಕ ಕಳಿಸಿದ್ದರು.
ವರಮಹಾಲಕ್ಷ್ಮಿ ಫೋಟೋ ಸ್ಪರ್ಧೆಯಲ್ಲಿ 10 ಅತ್ಯುತ್ತಮ ಅಲಂಕರಿಸಿದ ಚಿತ್ರಗಳ ವಿಜೇತರಾದ
ಲತಾ ಹೆಗಡೆ,
ಚೈತ್ರ B,
ರಕ್ಷಿತಾ,
ಹೇಮಂತ್ ಕುಮಾರ್ ,ಚಂದನ್,
ಸುನೀತಾ, ಪ್ರೀತಿ .ಕೆ.ಮಂಜುಳ,ರೀಶು ಪುರುಷೋತ್ತಮ್ ,ಜ್ಯೋತಿ
ಅವರುಗಳಿಗೆ ಬಹುಮಾನ ವಿತರಿಸಲಾಯಿತು.
ಆನಂತರ ಸ್ಪರ್ಧಿಸಿದ ಎಲ್ಲಾ ಸ್ಪರ್ಧಾಳುಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು
ಕಾರ್ಯಕ್ರಮ ದಲ್ಲಿ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್,
ಸಂದ್ಯಾರಾಣಿ, ಕಾವ್ಯ, ಸಹನಾ, ತಾರಾ, ಜ್ಯೋತಿ , ಸವಿತಾ ಘಾಟ್ಕೆ, ಜಯಶ್ರೀ, ಶೃತಿ, ರಾಘವೇಂದ್ರ ಮತ್ತಿತರು ಉಪಸ್ಥಿತರಿದ್ದರು.
