ಬೆಂಗಳೂರು: ಕನ್ನಡಿಗರ ಅಭಿಮಾನವನ್ನು ಪಹಲ್ಗಾಮ್ ದಾಳಿಗೆ ಹೋಲಿಸಿದ ಸೋನು ನಿಗಮ್ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.
ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರು ನಗರ ಘಟಕದ ಅಧ್ಯಕ್ಷ ಧರ್ಮರಾಜ್ ಅವರು ನೀಡಿದ ದೂರಿನ ಆಧಾರದ ಮೇಲೆ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಖಾಸಗಿ ಕಾಲೇಜೊಂದರ ಕಾರ್ಯಕ್ರಮದಲ್ಲಿ ಕನ್ನಡ ಹಾಡು ಹೇಳುವಂತೆ ವಿದ್ಯಾರ್ಥಿಗಳು ಕೇಳಿದ್ದಕ್ಕೆ,ಇದಕ್ಕೇ ಪಹಲ್ಗಾಮ್ನಲ್ಲಿ ಅಟ್ಯಾಕ್ ಆಗಿದ್ದು ಎಂದು ಸೋನು ನಿಗಮ್ ಹೇಳಿದ್ದ ವೀಡಿಯೋ ವೈರಲ್ ಆಗಿತ್ತು.
ಅದಕ್ಕಾಗಿ ಸೋನು ನಿಗಮ್ ವಿರುದ್ಧ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಯಾವುದೇ ನಿರ್ಮಾಪಕರು ಸೋನು ನಿಗಮ್ ಇಂದ ಹಾಡು ಹೇಳಸಬಾರದು. ಹೇಳಿಸಿದರೆ ಅದಕ್ಕೆ ನೀವೆ ಹೊಣೆ ಎಂದು ಎಚ್ಚರಿಕೆ ಕೂಡ ನೀಡಿದ್ದರು.
