ಮೈಸೂರು: ಗ್ಯಾರೇಜ್ ವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ ಬೈಕು,ಕಾರುಗಳು ಸುಟ್ಟು ಹೋದ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಪಡುವಕೋಟೆಯ ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ಸಂಭವಿಸಿ 18 ಬೈಕುಗಳು ಎರಡು ಮೂರು ಕಾರುಗಳು ಸುಟ್ಟು ಕರಕಲಾಗಿವೆ.
ಪಡುವಕೋಟೆ ಗ್ರಾಮದ ನಿವಾಸಿ ಅಜಿತ್ ಎಂಬುವರಿಗೆ ಸೇರಿದ ಗ್ಯಾರೇಜ್ ನಲ್ಲಿ ಈ ಘಟನೆನಡೆದಿದೆ.
ಸುದ್ದಿ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಆರಿಸಿದ್ದಾರೆ. ಹೆಚ್.ಡಿ. ಕೋಟೆ ಪೊಲೀಸರು ಪರಿಶೀಲನೆ ನಡೆಸಿದರು.