ಪಿ ಜಿ ಆರ್ ಎಸ್ ಎಸ್ ನಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

Spread the love

ಮೈಸೂರು,ಆ.2: ಜಿಲ್ಲೆಯ ಹುಣಸೂರು ತಾಲೂಕು ಮನುಗನಹಳ್ಳಿ ಪಂಚಾಯಿತಿಗೆ ಸೇರಿದ ಅಂದರಹಳ್ಳಿ ಗ್ರಾಮದಲ್ಲಿ ವಿವಿಧ ಸಮಿತಿ ವತಿಯಿಂದ ಉಚಿತ ಆರೋಗ್ಯ ಮತ್ತು ಉಚಿತ ಕಣ್ಣಿನ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಯಿತು.

ಪಂಚಾಯಿತಿ ಗ್ರಾಮೀಣ ಅಭಿವೃದ್ಧಿ ರೈತರ ಸೇವಾ ಸಮಿತಿ, ಮನುಗನಹಳ್ಳಿ ಪಂಚಾಯಿತಿ, ಸಮೃದ್ಧಿ ವಾರ್ತೆ ಪತ್ರಿಕೆ ಹಾಗೂ ಆರ್‌ ಟಿ ಐ ಮಾಹಿತಿ ಪತ್ರಿಕೆ ವತಿಯಿಂದ ನಾರಾಯಣ ಆಸ್ಪತ್ರೆ, ಅನ್ನಪೂರ್ಣ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ಕಣ್ಣಿನ ತಪಾಸಣೆ ಶಿಬಿರದಲ್ಲಿ ಹಲವಾರು ಗ್ರಾಮಸ್ಥರು ಭಾಗವಹಿಸಿ ತಪಾಸಣೆ ಮಾಡಿಸಿಕೊಂಡರು.

ಪಿ ಜಿ ಆರ್‌ಎಸ್ ಎಸ್ ಅಧ್ಯಕ್ಷರಾದ ಯಾದವ್ ಹರೀಶ್ ಮತ್ತು ಸೌಮ್ಯ ಸ್ವಾಮಿ, ಉಪಾಧ್ಯಕ್ಷರಾದ ಸತ್ಯ,ರಾಜ್ಯ ಸಂಚಾಲಕರಾದ ರಕ್ತದಾನಿ ಮಂಜು, ಖಜಂಚಿ ಮಂಜುಳಾ, ಕಾರ್ಯದರ್ಶಿ ರವೀಂದ್ರ,
ಪಂಚಾಯಿತಿ ಬಿಲ್ ಕಲೆಕ್ಟರ್ ಮಧು, ಅಟೆಂಡರ್ ನಾಗೇಶ್ ಹಾಗೂ ಅಂದರಹಳ್ಳಿ ಗ್ರಾಮದ ಹಿರಿಯ ನಾಗರಿಕರು, ಮಹಿಳೆಯರು ಭಾಗವಹಿಸಿದ್ದರು.

150ಕ್ಕೂ ಹೆಚ್ಚು ಜನ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.