ರಾಜ್ಯಪಾಲ ಸಿ ಎಚ್ ವಿಜಯಶಂಕರ್ ಗೆ ಶುಭ ಕೋರಿದ ತನ್ವೀರ್ ಸೇಠ್

Spread the love

ಮೈಸೂರು: ಮೈಸೂರಿನ ಊಟಿ ರಸ್ತೆಯಲ್ಲಿರುವ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಆಗಮಿಸಿದ ಮೇಘಾಲಯ ರಾಜ್ಯಪಾಲರಾದ ಸಿ. ಎಚ್ ವಿಜಯಶಂಕರ್ ರವರಿಗೆ ಮಾಜಿ ಸಚಿವರು ಹಾಗೂ ಶಾಸಕರಾದ ತನ್ವೀರ್ ಸೇಠ್ ಶುಭ ಕೋರಿದರು.

ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ವತಿಯಿಂದ ಇಂದು ವಿಜಯಶಂಕರ್ ಅವರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು,ಹಾಗಾಗಿ ಆಶ್ರಮಕ್ಕೆ ಭೇಟಿ ನೀಡಿದ ಅವರನ್ನು ತನ್ವೀರ್ ಸೇಠ್ ಅವರು ಸ್ವಾಗತಿಸಿ ಹೂವಿನ ಹಾರ ಹಾಕಿ ಶುಭ‌ ಹಾರೈಸಿದರು.

ಈ ವೇಳೆ ಶಾಸಕರಾದ ಟಿ.ಎಸ್ ಶ್ರೀವತ್ಸ , ಬಿಜೆಪಿ ಹಿರಿಯ ಮುಖಂಡರಾದ ಮಾರುತಿ ರಾವ್ ಪವರ್ ,ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಎಂ ಆರ್ ಬಾಲಕೃಷ್ಣ, ಶಂಕರ್ ನಾರಾಯಣ ಶಾಸ್ತ್ರಿ, ಹೊಯ್ಸಳ ಸಂಘದ ನಿರ್ದೇಶಕರಾದ ಪ್ರಶಾಂತ್ ಹಾಗೂ ಗಣಪತಿ ಸಚ್ಚಿದಾನಂದ ಆಶ್ರಮದ ಸಿದ್ದಾರ್ಥ, ರಾಜು ಸೇರಿದಂತೆ ಸ್ವಯಂಸೇವಕರು ಹಾಜರಿದ್ದರು.