ಸರ್ಕಾರಿ ಆಸ್ಪತ್ರೆಗಳಿಗೆ ಅಪರ ಜಿಲ್ಲಾಧಿಕಾರಿಡಾ. ಪಿ.ಶಿವರಾಜು ದಿಢೀರ್ ಭೇಟಿ

ಮೈಸೂರು: ಮೈಸೂರು ತಾಲೂಕಿನ ಹಲವು
ಸರ್ಕಾರಿ ಆಸ್ಪತ್ರೆಗಳಿಗೆ ಅಪರ ಜಿಲ್ಲಾಧಿಕಾರಿ
ಡಾ. ಪಿ.ಶಿವರಾಜು ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.

ಮೈಸೂರು ತಾಲೂಕಿನ ತಾಲೂಕು ಉಸ್ತುವಾರಿ ಅಧಿಕಾರಿಯೂ ಆಗಿರುವ ಡಾ.ಪಿ. ಶಿವರಾಜು ಅವರು ತಾಲೂಕಿನ ಸರಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ರೋಗಿಗಳಿಗೆ ಉತ್ತಮವಾದ ವೈದ್ಯಕೀಯ ಸೇವೆ , ಔಷಧೋಪಚಾರಗಳನ್ನು ಸಮರ್ಪಕವಾಗಿ ನೀಡುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನಿರ್ದೇಶನದ ಮೇರೆಗೆ
ಸರ್ಕಾರಿ ಆಸ್ಪತ್ರೆಗಳ ಸುಧಾರಣೆಗಾಗಿ ಹಾಗೂ ರೋಗಿಗಳಿಗೆ ಸರ್ಕಾರಿ ಸೇವೆಗಳು ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಶಿವರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ರೋಗಿಗಳು ಮತ್ತು ಅವರ ಕುಟುಂಬದವರ ಜೊತೆ ಔಷಧೋಪಚಾರ ಕುರಿತು ಚರ್ಚೆ ನಡೆಸಿದರು.

ಸರ್ಕಾರಿ ಸವಲತ್ತುಗಳನ್ನು ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು, ರೋಗಿಗಳಿಗೆ ಉತ್ತಮವಾದ ವೈದ್ಯಕೀಯ ಸೇವೆ ಮತ್ತು ಉಪಚಾರ ಔಷಧೋಪಚಾರ
ಸಮರ್ಪಕವಾಗಿ ಸಿಗುವಂತೆ ನೋಡಿಕೊಳ್ಳಬೇಕೆಂದು ನಿರ್ದೇಶನ ನೀಡಿದರು

ಈ ಸಂದರ್ಭದಲ್ಲಿ ಟಿಹೆಚ್ಒ ಡಾ. ಪುಟ್ಟತಾಯಮ್ಮ ಹಾಗು ವೈದ್ಯರುಗಳು ಹಾಜರಿದ್ದರು.