ಶೇ.100ರಷ್ಟು ಅನುದಾನ ಬಳಕೆಗೆ ಅಧಿಕಾರಿಗಳಿಗೆ ಲಕ್ಷ್ಮೀ ಕಾಂತ ರೆಡ್ಡಿ ಸೂಚನೆ

Spread the love

ಮೈಸೂರು: ಎಸ್ ಸಿ,ಎಸ್ ಟಿ ಸಮುದಾಯದ ಕಲ್ಯಾಣಕ್ಕೆ ವಿವಿಧ ಇಲಾಖೆಗೆ ಎಸ್.ಸಿ.ಪಿ-ಟಿ.ಎಸ್.ಪಿ. ಯೋಜನೆಯಡಿ ಬಿಡುಗಡೆಯಾದ ಅನುದಾನ ಶೇ.100ರಷ್ಟು ಬಳಕೆಯಾಗಬೇಕೆಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ಸೂಚಿಸಿದರು.

ಅನುಸೂಚಿತ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ ಕಾರ್ಯಕ್ರಮಗಳ ಅನುಷ್ಠಾನದ ಜಿಲ್ಲಾ ಮಟ್ಟದ ಸಭೆಯಲ್ಲಿ ಮಾತನಾಡಿದ ಅವರು,ಇಲಾಖೆಗಳು ಬಿಡುಗಡೆಯಾದ ಅನುದಾನಕ್ಕೆ ಆರ್ಥಿಕ ಪ್ರಗತಿ ಸಾಧಿಸ ಬೇಕೆಂದು ಸಲಹೆ ನೀಡಿದರು.

ಭೌತಿಕ ಮತ್ತು ಆರ್ಥಿಕ ಪ್ರಗತಿ ಸಾಧಿಸದಿದ್ದರೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಜವಾಬ್ದಾರರಾಗುತ್ತಾರೆ. ಈ ಸಂಬಂಧ ಜಿಲ್ಲಾ ಮಟ್ಟದ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಲೋಕೋಪಯೋಗಿ ಇಲಾಖೆ ಕೈಗೊಂಡಿರುವ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ. ಕಾವೇರಿ ನೀರಾವರಿ ನಿಗಮದ ವತಿಯಿಂದ ಫಲಾನುಭವಿಗಳಿಗೆ ಬೋರ್ವೆಲ್ ಗಳು, ಎಸ್ ಸಿ ಎಸ್ ಟಿ ಕಾಲೋನಿಗಳಲ್ಲಿ ಸಿ ಸಿ ರಸ್ತೆ ಕಾಮಗಾರಿಗಳನ್ನು ಹಮ್ಮಿಕೊಂಡಿದ್ದು ಕಾಮಗಾರಿಗಳ ಗುಣಮಟ್ಟ ಉತ್ತಮವಾಗಿರಬೇಕೆಂದು ಆದೇಶಿಸಿದರು.

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಯುವ ವಕೀಲರಿಗೆ ನೀಡುವ ಸ್ಟೆ ಫಂಡ್ ಗೆ ಫಲಾನುಭವಿಗಳ ಆಯ್ಕೆಯನ್ನು ಆಯ್ಕೆ ಸಮಿತಿಯಲ್ಲಿ ಮಾಡಿ, ಪಟ್ಟಿ ಪ್ರಕಟಿಸಿ. ಮಾರ್ಚ್ ಅಂತ್ಯದೊಳಗೆ ಎಲ್ಲಾ ಅನುದಾನವನ್ನು ಬಳಕೆ ಮಾಡಬೇಕು ಈ ಸಂಬಂಧ ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಆದೇಶಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಎಂ ಗಾಯತ್ರಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್. ಬಸವರಾಜ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ರಂಗೇಗೌಡ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.