ಡೆಹ್ರಾಡೂನ್: ಉತ್ತರಾಖಂಡ್ನಲ್ಲಿ ಕಳೆದ 48 ಗಂಟೆಗಳಿಂದ ಒಂದೇ ಸಮನೆ ಮಳೆ ಸುರಿಯುತ್ತಿದ್ದು ಬಹಳಷ್ಟು ರಸ್ತೆಗಳು ಬಂದ್ ಆಗಿವೆ.
ಗುಡ್ಡಗಾಡು ಪ್ರದೇಶದಲ್ಲಿ ಮಳೆಯಿಂದ ಹೆದ್ದಾರಿ, ಗಡಿ ರಸ್ತೆಗಳು ಸೇರಿದಂತೆ 24 ರಸ್ತೆಗಳು ಸಂಪೂರ್ಣ ಹಾಳಾಗಿದ್ದು ಸಂಚಾರ ಬಂದ್ ಆಗವೆ,ಹಾಗಾಗಿ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಮಳೆ ನಿರಂತರವಾಗಿ ಸುರಿಯುತ್ತಿರುವುದರಿಂದ ಗುಡ್ಡ ಕುಸಿತ ಸೇರಿದಂತೆ ಅನೇಕ ನೈಸರ್ಗಿಕ ವಿಪತ್ತುಗಳು ಸಂಭವಿಸಿದೆ. ಇದರಿದಾಗಿ 18 ಜನರು ಸಾವನ್ನಪ್ಪಿದ್ದು, ಇಬ್ಬರು ಕಣ್ಮರೆಯಾಗಿದ್ದಾರೆ.
ಗುಡ್ಡಗಾಡು ಪ್ರದೇಶದಲ್ಲಿ ಸಂಭವಿಸಿದ ನೈಸರ್ಗಿಕ ವಿಪತ್ತಿನ ನಿರ್ವಹಣೆ ಸಂಬಂಧ ಮುಖ್ಯ ಮಂತ್ರಿ ಪುಷ್ಕರ್ ಸಿಂಗ್ ಧಾಮಿ ವಿಪತ್ತು ನಿರ್ವಹಣಾ ಇಲಾಖೆ ಅಧಿಕಾರಿಗಳೊಂದಿಗೆ ಹಲವು ಸುತ್ತಿನ ಸಭೆ ನಡೆಸಿದ್ದಾರೆ.
ಮಳೆ ಹೀಗೇ ಮುಂದುವರೆದರೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಲಿದೆ,ಹಾಗಾಗಿ ತಕ್ಷಣವೇ ರಕ್ಷಣೆ ಮತ್ತು ಪರಿಹಾರ ಕಾರ್ಯ ಕೈಗೊಳ್ಳುವಂತೆ ಸೂಚಿಸಿದ್ದಾರೆ
ನೈಸರ್ಗಿಕ ವಿಪತ್ತಿನಿಂದ ಜೂನ್ 1ರಿಂದ ಜೂನ್ 23ರ ನಡುವೆ 18 ಮಂದಿ ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡಿದ್ದಾರೆ, ಇಬ್ಬರು ನಾಪತ್ತೆಯಾಗಿದ್ದಾರೆ.
ರಸ್ತೆ ಅಪಘಾತದಲ್ಲಿ ನೂನ್ 1ರಿಂದ 23ರ ವರೆಗೆ 28 ಮಂದಿ ಸಾವನ್ನಪ್ಪಿದ್ದು, 128 ಮಂದಿ ಗಾಯಗೊಂಡಿದ್ದಾರೆ. ಚಾರ್ಧಾಮ್ ಯಾತ್ರೆಯಲ್ಲಿ 142 ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ.
ಭಗೇಶ್ವರ ಜಿಲ್ಲೆ ಸೇರಿದಂತೆ ಹಲವು ಕಡೆ ಭಾರೀ ಮಳೆಯಿಂದಾಗಿ ಆರೇಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಡೆಹ್ರಾಡೂನ್, ನೈನಿತಾಲ್ ಮತ್ತು ರುದ್ರಪ್ರಯಾಗ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.