ಚಾಮುಂಡಿ ಬೆಟ್ಟದ ಅಭಿವೃದ್ಧಿಗೆ ಪ್ರಾಧಿಕಾರ ರಚನೆ ವಿರೋಧಿಸಿ ಪ್ರತಿಭಟನೆ

ಮೈಸೂರು: ಕರ್ನಾಟಕ ಸೇನಾ ಪಡೆ ವತಿಯಿಂದ ಚಾಮುಂಡಿ ಬೆಟ್ಟದ ಆವ್ಯವಸ್ಥೆ ಹಾಗೂ ಪ್ರಾಧಿಕಾರ ವಿರೋದಿಸಿ ಮೈಸೂರಿನ ಹಳೆ ಡಿಸಿ ಆಫೀಸ್ ಮುಂದೆ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ರಾಜ್ಯ ಸರ್ಕಾರ ಶ್ರೀ ಚಾಮುಂಡೇಶ್ವರಿ ಅಮ್ಮನವರ ದರ್ಶನಕ್ಕೆ, ಸ್ಮಾರ್ಟ್ ಕಾರ್ಡ್ ಜಾರಿಗೊಳಿಸಲು ಮುಂದಾಗಿರುವ ಕ್ರಮವನ್ನು ಖಂಡಿಸಲಾಯಿತು.

ಚಾಮುಂಡಿ ಬೆಟ್ಟದ ಅಭಿವೃದ್ಧಿಗಾಗಿ ಹೊಸದಾಗಿ ಪ್ರಾಧಿಕಾರ ರಚಿಸುತ್ತಿರುವ ಕ್ರಮವನ್ನು ವಿರೋಧಿಸಿ ಪ್ರತಿಭಟನಾನಿರತರು ಘೋಷಣೆ ಕೂಗಿದರು.

ಮೈಸೂರು ಅರಸರ ಸಂಸ್ಥಾನದ ಆದಿದೇವತೆ, ನಾಡದೇವತೆ, ತಾಯಿ ಚಾಮುಂಡೇಶ್ವರಿ ದೇವಿ ಬೆಟ್ಟವನ್ನು ಶ್ರದ್ಧಾಭಕ್ತಿಯಿಂದ ಅಭಿವೃದ್ಧಿಪಡಿಸಿದ್ದು, ದೇವಿಯ ಮಹಾನ್ ಆರಾಧಕರಾದ ಮುಮ್ಮಡಿ ಕೃಷ್ಣರಾಜ ಒಡೆಯರ್ ರವರು.

ಬೆಟ್ಟದಲ್ಲಿ, ದೇವಸ್ಥಾನಕ್ಕೆ ಪೂಜೆ ಮಾಡುವ ಅರ್ಚಕರಿಂದ ಹಿಡಿದು ಎಲಾ ವರ್ಗದವರಿಗೂ ಆಗಿನ ಕಾಲದಲ್ಲಿಯೇ ಅಲ್ಲಿ ಮನೆಗಳನ್ನು ನಿರ್ಮಿಸಿ ಕೊಟ್ಟದ್ದಾರೆ. ಜೊತೆಗೆ ಚಾಮುಂಡಿ ಬೆಟ್ಟ ಈಗ ಒಂದು ಗ್ರಾಮವಾಗಿದೆ, ಗ್ರಾಮ ಪಂಚಾಯಿತಿಯೂ ಇದೆ.

ಈಗ ಪ್ರಾಧಿಕಾರ ರಚನೆಯಾದರೆ ಸುಮಾರು 300 ಮೀಟರ್ ಸುತ್ತಳತೆ (ಅಂದರೆ 1000 ಅಡಿ ಸುತ್ತಮುತ್ತ) ಅಭಿವೃದ್ಧಿ ಮಾಡುತ್ತೇವೆ ಎನ್ನುತ್ತಾರೆ. ಆಗ ಇಡೀ ಗ್ರಾಮವೇ ಇಲ್ಲದಂತಾಗುತ್ತದೆ ಎಂದು ಸೇನಾಪಡೆ ಮುಖಂಡರು ಆತಂಕ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಸ್ಮಾರ್ಟ್ ಕಾರ್ಡ್ ಹೆಸರಿನಲ್ಲಿ 10,000 25000 ಹಾಗೂ ರೂ.1,00,000 ನಿಗದಿಪಡಿಸಲು ಉದ್ದೇಶಿಸಿರುವುದು ಅತ್ಯಂತ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರು ನಗರದಲ್ಲಿ ಚಾಮುಂಡಿ ಬೆಟ್ಟ ಇರುವುದರಿಂದ ಪ್ರಾಧಿಕಾರದ ಅವಶ್ಯಕತೆಯೇ ಇಲ್ಲ, ಈಗಾಗಲೇ ಚಾಮುಂಡಿ ಬೆಟ್ಟ ಮುಜರಾಯಿ ಇಲಾಖೆ, ಧಾರ್ಮಿಕ ದತ್ತಿ ಗೆ ಒಳಪಟ್ಟು ಭಕ್ತಾದಿಗಳಿಂದ ಕೋಟ್ಯಂತರ ಆದಾಯ ಬರುತ್ತಿದೆ.

ಚಾಮುಂಡಿ ಬೆಟ್ಟದ ಅಭಿವೃದ್ಧಿಗೆ ಈ ಹಣವನ್ನೇ ಸದ್ಬಳಕೆ ಮಾಡಿಕೊಳ್ಳಬೇಕೆಂದು ಹಾಗೂ ಸ್ಮಾರ್ಟ್ ಕಾರ್ಡ್ ಪ್ರಸ್ತಾವನೆಯನ್ನು ಕೂಡಲೇ ಕೈಬಿಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ವಹಿಸಿದ್ದರು.

ಪ್ರಭುಶಂಕರ್ ಎಂ ಬಿ, ಪ್ರಜೀಶ್, ಕೃಷ್ಣಪ್ಪ, ಸುರೇಶ್ ಗೋಲ್ಡ್, ಶಿವಲಿಂಗಯ್ಯ, ನಾರಾಯಣ ಗೌಡ, ಕುಮಾರ್ ಗೌಡ, ಸಿಂದುವಳ್ಳಿ, ಶಿವಕುಮಾರ್, ವರಕೂಡು ಕೃಷ್ಣಗೌಡ, ಮಂಜುಳ, ವಿಜಯೇಂದ್ರ, ಭಾಗ್ಯಮ್ಮ, ರಘು ಅರಸ್, ಎಳನೀರು ರಾಮಣ್ಯ, ಪ್ರದೀಪ, ಗುರು ಮಲ್ಲಪ್ಪ, ಶಂಕರ್ ಗುರು, ಚಂದ್ರಶೇಖರ್, ಶಾಂತಕುಮಾರ್, ರಾಧಾಕೃಷ್ಣ ಅಕ್ಟರ್ ತ್ಯಾಗರಾಜ್, ಮಹಾದೇವ,ಸ್ವಾಮಿ ಗೌಡ, ಕೃಷ್ಣಮೂರ್ತಿ, ವಿಷ್ಣು ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.