ಹುಣಸೂರು: ಹುಣಸೂರು ತಾಲೂಕು ಉದ್ದೂರು ಕಾವಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊನ್ನಿಕುಪ್ಪೆ ಗ್ರಾಮದಲ್ಲಿ ಚರಂಡಿ ವ್ಯವಸ್ಥೆ ಹದಗೆಟ್ಟು ಹೋಗಿದ್ದುದನ್ನು ಸರಿಪಡಿಸಲಾಗಿದ್ದು, ಜನ ಸಂತಸ ವ್ಯಕ್ತಪಡಿಸಿದ್ದಾರೆ.
ಚರಂಡಿಯಲ್ಲಿ ಕಸ ತೆಗೆದು ಯಾವದೋ ಕಾಲವಾಗಿತ್ತು,ಈಗ ಸತತ ಮಳೆ ಬರುತ್ತಿದ್ದು,ನೀರು ಮುಂದೆ ಹೋಗದೆ ಅಲ್ಲೇ ನಿಂತು ಕೊಳೆತು ಗಬ್ಬು ವಾಸನೆ ಬರುತ್ತಿತ್ತು.

ಚರಂಡಿಯಲ್ಲಿ ಹುಳು,ಹುಪ್ಪಟಿ ತುಂಬಿತ್ತಲ್ಕದೆ ಜೊತೆಗೆ ಸೊಳ್ಳೆಗಳ ಕಾಟ ವಿಪರೀತವಾಗಿತ್ತು.
ಇದರಿಂದಾಗಿ ಹೊನ್ನಿಕುಪ್ಪೆ ಗ್ರಾಮದ ಜನ ಜ್ವರದಿಂದ ಬಳಲುತ್ತಿದ್ದಾರೆ. ಕೆಲವರು ಆಸ್ಪತ್ರೆಗೂ ದಾಖಲಾಗಿದ್ದಾರೆ ಎಂದು ಕರ್ನಾಟಕ ಪ್ರಜಾ ಪಾರ್ಟಿ ರೈತ ಪರ್ವ ಹುಣಸೂರು ತಾಲೂಕು ಅಧ್ಯಕ್ಷ ಚೆಲುವರಾಜು ಆತಂಕ ವ್ಯಕ್ತಪಡಿಸಿ ವರ್ಷಿಣಿ ನ್ಯೂಸ್ ವೆಬ್ ಪೋರ್ಟಲ್ ಗೆ ಮಾಹಿತಿ ನೀಡಿದ್ದರು.
ಜನರ ಆತಂಕ ಗಮನಿಸಿ ವರ್ಷಿಣಿ ನ್ಯೂಸ್ ನವರು ಸುದ್ದಿ ಪ್ರಕಟಿಸಿದ್ದರು.ಸುದ್ದಿ ಪ್ರಕಟವಾದ ಬೆನ್ನಲ್ಲೇ ಸಂಬಂಧ ಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ
ಚರಂಡಿ ಹೂಳು ತೆಗೆಸಿ ಸಾಧ್ಯವಾದಷ್ಟು ಸರಿಪಡಿಸಿದ್ದಾರೆ.
ಚರಂಡಿ ಸ್ವಚ್ಛತೆ ಬಗ್ಗೆ ಕ್ರಮ ಕೈಗೊಂಡ ಗ್ರಾಮ ಪಂಚಾಯಿತಿ ಸದಸ್ಯರು, ಅಧ್ಯಕ್ಷರು,ಪಿಡಿಒ ಹಾಗೂ ವರ್ಷಿಣಿ ನ್ಯೂಸ್ ವೆಬ್ ಪೋರ್ಟಲ್ ನವರಿಗೆ ಸ್ಥಳೀಯ ಜನರು ಮತ್ತು ಚೆಲುವರಾಜು ಕೃತಜ್ಞತೆ ಸಲ್ಲಿಸಿದ್ದಾರೆ.