ಚಾ.ನಗರದಲ್ಲಿ ನಾಯಕ ಸಮುದಾಯದಿಂದ ಭಾರೀ ಪ್ರತಿಭಟನೆ

ಚಾಮರಾಜನಗರ: ಚಾಮರಾಜನಗರ ತಾಲೂಕಿನ ಜ್ಯೋತಿಗೌಡನ ಪುರ ಗ್ರಾಮದಲ್ಲಿ ಅಂಬೇಡ್ಕ‌ರ್ ಭಾವಚಿತ್ರವಿರುವ ಪ್ಲೆಕ್ಸ್ ಹಾಗೂ ಬುದ್ಧನ ಮೂರ್ತಿ ವಿರೂಪಗೊಳಿಸಿ ದವರನ್ನು ಬಂಧಿಸುವಂತೆ ಒತ್ತಾಯಿಸಿ ಶನಿವಾರ ಭಾರೀ ಪ್ರತಿಭಟನೆ ನಡೆಯಿತು.

ಅಂಬೇಡ್ಕ‌ರ್ ಭಾವಚಿತ್ರವಿರುವ ಪ್ಲೆಕ್ಸ್ ಹಾಗೂ ಬುದ್ಧನ ಮೂರ್ತಿ ವಿರೂಪ ಗೊಳಿರುವ ನೈಜ ಅಪರಾಧಿಗಳನ್ನು ಬಂಧಿಸಿ ನಿರಪರಾಧಿಗಳನ್ನು ಬಿಡುಗಡೆಗೊಳಿ ಸಬೇಕೆಂದು ಆಗ್ರಹಿಸಿ ಜಿಲ್ಲಾ ನಾಯಕ ಸಮುದಾಯದ ವತಿಯಿಂದ ನಗರದಲ್ಲಿ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.

ನಗರದ ಮಾರಿಗುಡಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆಯಲ್ಲಿ ಪಚ್ಚಪ್ಪ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಪ್ರತಿಭಟನೆ ನಡೆಸಿದರು.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.