ಭವಿಷ್ಯದಲ್ಲಿ ಭಾರತದ ಆರ್ಥಿಕ ಪ್ರಗತಿ ಉಜ್ವಲ- ಉಲ್ಲಾಸ್ ಕಾಮತ್ ವಿಶ್ವಾಸ

Spread the love

ಮೈಸೂರು: ಮುಂದಿನ ಇಪ್ಪತ್ತು ವರ್ಷಗಳಲ್ಲಿ ಭಾರತ ಆರ್ಥಿಕತೆಯಲ್ಲಿ ವಿಶ್ವದ ಇತರೆ ರಾಷ್ಟ್ರಗಳಿಗಿಂತಲೂ ಉತ್ತಮ ಪ್ರಗತಿ ಸಾಧಿಸಲಿದೆ ಎಂದು ಬೆಂಗಳೂರಿನ ಸಾಮಿ-ಸಬಿನ್ಸಾ ಗ್ರೂಪ್ ನಿರ್ದೇಶಕ ಕೆ. ಉಲ್ಲಾಸ್ ಕಾಮತ್ ವಿಶ್ವಾಸ ವ್ಯಕ್ತಪಡಿಸಿದರು.

ಮೈಸೂರಿನ ವಿಪ್ರ ಪ್ರೊಫೆಷನಲ್‌ ಫೋರಂ ವತಿಯಿಂದ ವಿಜಯನಗರದ ಜೆಸಿಎಸಿ ಸಭಾಂಗಣದಲ್ಲಿ ಆಯೋಜಿಸಿದ್ದ ವಿಪಿಎಫ್‌ ಬಿಸಿನೆಸ್‌ ಕಾನ್‌ಕ್ಲೇವ್‌ ಸಮಾರಂಭದಲ್ಲಿ ಮಾತನಾಡಿದ ಅವರು, ವಿಶ್ವದ ಒಟ್ಟು ಜಿಡಿಪಿ ಅಂದಾಜು 100 ಥ್ರಿಲಿಯನ್‌ಗಳಿದ್ದು, ವಿಶ್ವದ ಹಿರಿಯಣ್ಣ ಎಂದು ಕರೆಯಲ್ಪಡುವ ಅಮೆರಿಕಾದ ಜಿಡಿಪಿ ೩೦ ಥ್ರಿಲಿಯನ್‌ ಇದೆ ಎಂದು ಹೇಳಿದರು ‌

ಆ ಮೂಲಕ ವಿಶ್ವದ ಆರ್ಥಿಕತೆಯ ಮೂರನೇ ಒಂದು ಭಾಗ ಅಮೆರಿಕಾ ಹೊಂದಿದೆ. ಭಾರತದ ಜನಸಂಖ್ಯೆಯ ಶೇ.25ಕ್ಕಿಂತ ಕಡಿಮೆ ಜನಸಂಖ್ಯೆ ಹೊಂದಿದ್ದರೂ ಅಮೆರಿಕಾದ ಆರ್ಥಿಕತೆ ಭಾರತಕ್ಕಿಂತ ಅತ್ಯಂತ ಉತ್ತಮವಾಗಿದೆ,
ಆನಂತರದ ಸ್ಥಾನಗಳಲ್ಲಿ ಚೀನಾ, ಜಪಾನ್‌ ಹಾಗೂ ಭಾರತ ಇದೆ. ಭಾರತ ಆರ್ಥಿಕತೆಯಲ್ಲಿ ವಿಶ್ವದ ನಾಲ್ಕನೇ ಸ್ಥಾನದಲ್ಲಿದೆ ಎಂದು ತಿಳಿಸಿದರು.

ನಮಗಿಂತ ಮುಂದಿರುವ ರಾಷ್ಟ್ರಗಳು ಆರ್ಥಿಕತೆಯಲ್ಲಿ ಸಾಕಷ್ಟು ಮಂಚೂಣಿಯಲ್ಲಿವೆ. ಈ ನಿಟ್ಟಿನಲ್ಲಿ ಭಾರತ ಮತ್ತು ಅಮೆರಿಕಾ ರಾಷ್ಟ್ರಗಳ ನಡುವಿನ ಸಂಬಂಧ ಉತ್ತಮವಾಗಿರಬೇಕಿದ್ದು, ಅವರಿಗೆ ನಮ್ಮ ಅಗತ್ಯತೆ ಇದೆ ಹಾಗೂ ನಮಗೂ ಅವರ ಅವಶ್ಯತೆ ಇದೆ ಎಂದು ಹೇಳಿದರು.

ಹಿರಿಯ ಪತ್ರಕರ್ತ ರವಿ ಹೆಗ್ಗಡೆ ಮಾತನಾಡಿ, ಕೃತಕ ಬುದ್ದಿಮತ್ತೆ(ಎಐ)ನಿಂದ ದೊಡ್ಡಮಟ್ಟದ ಪರಿಣಾಮ ಬೀರಲಿದ್ದು, ಇಡೀ ವಿಶ್ವವನ್ನೇ ಬದಲಿಸಲಿದೆ. ಪ್ರಮುಖವಾಗಿ ಎಐನಿಂದ ಬ್ರಾಹ್ಮಣ ಸಮುದಾಯದ ಮೇಲೆ ಗಂಭೀರವಾದ ಪರಿಣಾಮ ಉಂಟಾಗಲಿದೆ. ಬ್ರಾಹ್ಮಣರು ಮಾಡುವ ಕೆಲಸವನ್ನು ಎಐ ತಾನೇ ಮಾಡುತ್ತಿದೆ. ಉದಾಹರಣೆಗೆ ಬ್ರಾಹ್ಮಣರು ಹೇಳುವ ಮಂತ್ರವನ್ನು ಇಂದು ಎಐ ಹೇಳುತ್ತಿದೆ ಎಂದು ಕಳವಳ ವ್ಯಕ್ತಪಡಿಸಿ ದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಿಪಿಎಫ್ ಅಧ್ಯಕ್ಷ ಹಾಗೂ ಜಿಎಸ್‌ಎಸ್‌ ಸಮೂಹ ಸಂಸ್ಥೆಗಳ ಮುಖ್ಯಸ್ಥ ಯೋಗಾತ್ಮ ಡಿ. ಶ್ರೀಹರಿ ಅವರು ಮಾತನಾಡಿ, ವಿಪಿಎಫ್‌ ಮೈಸೂರಿನಲ್ಲಿ ತನ್ನ ವಿಂಗ್ ಆರಂಭಿಸಿದೆ. ನಾವು ಎರಡು ಕಾರಣಗಳಿಂದ ಒಂದಾಗುತ್ತಿದ್ದು, ಯಾರಿಗಾದರೂ ತೊಂದರೆ ಎದುರಾದರೆ ನೆರವಿಗೆ ಧಾವಿ ಸುತ್ತೇವೆ. ಮಾಧ್ಯಮ ಕ್ಷೇತ್ರದಲ್ಲಿರುವವರು ನಮ್ಮ ಸಂಪರ್ಕದಲ್ಲಿದ್ದು, ದೊಡ್ಡವರು ಚಿಕ್ಕವರೆಂಬ ತಾರ ತಮ್ಯ ಇಲ್ಲದೆ, ಎಲ್ಲರೂ ಒಂದಾಗಿ ಮುನ್ನಡೆಯುತ್ತಿದ್ದೇವೆ. ವಿಪಿಎಫ್‌ ಪ್ರಸ್ತುತ ಮೈಸೂರಿನಲ್ಲಿ ಆರಂಭಿಸಿ ದ್ದು ಮುಂದೆ ಮೈಸೂರಿನ ಅಕ್ಕಪಕ್ಕದ ನಾಲ್ಕು ಜಿಲ್ಲೆಗಳಲ್ಲೂ ಕಾರ್ಯಕ್ರಮ ಆಯೋಜನೆ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದ ಚೇರ್ಮೇನ್ ಸಮಾರ್ಥ್ ವಿದ್ಯಾ ಮಾತನಾಡಿ ವಿಫಿಎಫ್ ಘಟಕ ಸ್ಥಾಪನೆ ಮೂಲಕ ಸಮು ದಾಯದ ಜನರನ್ನು ಒಗ್ಗೂಡಿಸಿ ಸಂಕಷ್ಟದಲ್ಲಿರುವವರ ನೆರವಿಗೆ ನಿಲ್ಲುವ ಪ್ರಯತ್ನ ಮೊದಲ ಬಾರಿಗೆ ಯಶಸ್ಸು ಕಂಡಿದ್ದೇವೆ ಎಂದು ಹೇಳಿದರು ‌

ಉದ್ಯಮಿಗಳಾದ ಕೇಶವ್,ಜಿ.ಎಸ್.ಎಸ್.ಎಸ್ ಭರತ್,ಜಯಸಿಂಹ, ವೆಂಕಟೇಶ್,ಭಾಷ್ಯಂ ಎಸ್,ಶ್ರೀನಿವಾಸ್ ವರದರಾಜನ್,ಅನಂತನಾಗರಾಜ್,ರಾಧಕೃಷ್ಣ ಎಸ್ ಹಾಗೂ ವಿಪಿಎಫ್ ಸಮಿತಿ ಉಪಾಧ್ಯಕ್ಷರಾದ ಡಾ. ಮುರುಳಿ,ಎಸ್. ,ಕೆ.ಆರ್. ಸತ್ಯನಾರಾಯಣ್, ಕಾರ್ಯದರ್ಶಿ ಸುಧೀಂದ್ರ ಎ,ಜಂಟಿ ಕಾರ್ಯದರ್ಶಿಗಳಾದ ಶ್ರೀವತ್ಸ, ಮಂಜುನಾಥ್,ಸಮರ್ಥ್,ಖಜಾಂಚಿ ಸತ್ಯಪ್ರಕಾಶ್ ಸಿ.ಎಸ್., ನಿರ್ದೇಶಕರಾದ ಚಂದ್ರಶೇಖರ್ ಹೆಚ್.ಎನ್, ಜಿ.ಎಸ್ ಗಣೇಶ್,ಡಾ ಕಾರ್ತಿಕ್ ಪಂಡಿತ್, ಶಿವಪ್ರಸಾದ್, ಪಿ.ಎಸ್,ನಾರಾಯಣ್ ಡಿ.,ಪ್ರಭಕಾರ್ ರಾವ್. ಕೆ, ಡಾ.ಸವಿತಾ ಎಲ್, ಶಿವಶಂಕರ್ ಕೆ.ಎಸ್ ಉಪಸ್ಥಿತರಿದ್ದರು.