ಮೈಸೂರು: ಮಾಜಿ ಪ್ರಧಾನಿ ಇಂದಿರಾಗಾಂಧಿ ಯವರು ವಿಶ್ವದಲ್ಲಿ ಇಂಡಿಯಾವನ್ನು ಗುರುತಿಸುವಂತೆ ಆಡಳಿತ ನಡೆಸಿದವರು ಎಂದು ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್ ತಿಳಿಸಿದರು.
ನಜರ್ಬಾದ್ ನಟರಾಜ್ ನೇತೃತ್ವದಲ್ಲಿ ಗನ್ ಹೌಸ್ ವೃತ್ತದಲ್ಲಿರುವ ಇಂದಿರಾ ಕ್ಯಾಂಟೀನ್ ನಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಅಂಗವಾಗಿ ಸಾರ್ವಜನಿಕರಿಗೆ ಮೈಸೂರು ಪಾಕ್ ಊಟ ವಿತರಿಸಿ ಅವರು ಮಾತನಾಡಿದರು.
1965ರ ಭಾರತ-ಪಾಕಿಸ್ತಾನ ಯುದ್ಧ ನಡೆಯುತ್ತಿದ್ದಾಗ, ಇಂದಿರಾ ಅವರು,
ಶ್ರೀನಗರದ ಗಡಿ ಪ್ರದೇಶದಲ್ಲಿ ವಿಹಾರ ನಡೆಸಿದ್ದರು. ಪಾಕಿಸ್ತಾನಿ
ದಂಗೆಕೋರರು ನಗರದ ಹತ್ತಿರಕ್ಕೆ ನುಸುಳಿ ಬಂದಿದ್ದಾರೆ ಎಂದು
ಸೇನೆಯು ಎಚ್ಚರಿಕೆ ನೀಡಿದರೂ ಅದನ್ನು ಲೆಕ್ಕಿಸದ ಅವರು, ಜಮ್ಮು ಅಥವಾ ದೆಹಲಿಗೆ ವಾಸ್ತವ್ಯ ಸ್ಥಳಾಂತರಿಸಲು ನಿರಾಕರಿಸಿ ಪಾಕಿಸ್ತಾನದ ದಾಳಿಯನ್ನು ಯಶಸ್ವಿಯಾಗಿ ಹಿಮ್ಮೆಟ್ಟಿಸಿದ ದಿಟ್ಟ ಮಹಿಳೆ ಎಂದು ಬಣ್ಣಿಸಿದರು.
ಇಂದಿರಾ ಬಡವರ ಪರ ಇದ್ದರು ಎಂಬುದಕ್ಕೆ ಅವರು ರೂಪಿಸಿದ ಅನೇಕ ಕಾರ್ಯಕ್ರಮಗಳೇ ಸಾಕ್ಷಿ ಎಂದು ತಿಳಿಸಿದರು.
ಈ ದೇಶದ ಪ್ರತಿಯೊಬ್ಬರಿಗೂ ಅನ್ನ ಆಶ್ರಯ ಬಟ್ಟೆ ದೊರೆಯಲಿ ಎಂದು ಕಾರ್ಯಕ್ರಮಗಳನ್ನು ರೂಪಿಸಿದ್ದರಿಂದ ಇಂದಿಗೂ ಆ ಯೋಜನೆಗಳಿಂದ ಬಡವರಿಗೆ ಅನುಕೂಲವಾಗಿದೆ, ಇಂದಿರಾಗಾಂಧಿ ಯವರ ಆಡಳಿತ ಸುವರ್ಣ ಯುಗ ಎಂದು ನಜರ್ಬಾದ್ ನಟರಾಜ್ ತಿಳಿಸಿದರು.
ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಬ್ರಿಗೇಡ್ ರಾಜ್ಯಾಧ್ಯಕ್ಷರಾದ ಉದಯ್, ಲೋಕೇಶ್, ಕೃಷ್ಣಪ್ಪ (ಗಂಟಯ್ಯ ), ಡೈರಿ ವೆಂಕಟೇಶ್, ಎಸ್ ಎನ್ ರಾಜೇಶ್, ದಿನೇಶ್, ರಮೇಶ್, ರವಿಚಂದ್ರ, ರಾಕೇಶ್ ಮತ್ತಿತರರು ಹಾಜರಿದ್ದರು.
