ಜಾನಪದ ಒಂದು ಅಲೌಕಿಕ ಸಂವಿಧಾನ-ಡಾ ಜಾನಪದ ಬಾಲಾಜಿ

ಬೆಂಗಳೂರು: ಜಾನಪದ ಒಂದು ಅಲೌಕಿಕ ಸಂವಿಧಾನ ಇದ್ದಂತೆ ಎಂದು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ ಜಾನಪದ ಬಾಲಾಜಿ ಎಸ್ ತಿಳಿಸಿದರು.

ಬೆಂಗಳೂರಿನ ಪದ್ಮನಾಭನಗರ ಸಮುದಾಯ ಭವನದಲ್ಲಿ ಕನ್ನಡ ಜಾನಪದ ಪರಿಷತ್l ಪದ್ಮನಾಭನಗರ ವಿಧಾನ ಸಭಾ ಕ್ಷೇತ್ರ ಮಹಿಳಾ ಘಟಕದ ಉದ್ಘಾಟನೆ ಹಾಗೂ ಪದ ಪ್ರದಾನ ನೆರವೇರಿಸಿ ಅವರು ಮಾತನಾಡಿದರು.

ಜಾನಪದ ಮಹಿಳಾ ಪ್ರಧಾನವಾದದ್ದು, ಇದು ನಮ್ಮ ಪೂರ್ವಜರಿಂದ ಬಂದ ಬಳುವಳಿ, ಅದನ್ನು ಮುಂದಿನ ಪೀಳಿಗೆಗೆ ಕೊಂಡಯುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ.

ಜಾನಪದ ನಮ್ಮ ಸಂಸ್ಕೃತಿಯ ಮೂಲ ಬೇರು, ಇದನ್ನು ತರಬೇತಿ ಹಾಗೂ ದಾಖಲೀಕರಣದ ಮೂಲಕ ಉಳಿಸಿ ಬೆಳೆಸುವ ಕಾರ್ಯ ಕನ್ನಡ ಜಾನಪದ ಪರಿಷತ್ ಮಹಿಳಾ ಘಟಕದ ಮೂಲಕ ಆಗುತ್ತಿದೆ, ಕಲಾವಿದರ ಮಾಶಾಸನ ಹೆಚ್ಚಿಸಬೇಕು ಎಂದು ಸರ್ಕಾರವನ್ನು ಡಾ.ಜನಪದ ಎಸ್ ಬಾಲಾಜಿ ಅಗ್ರಹಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕನ್ನಡ ಜಾನಪದ ಪರಿಷತ್ ಬೆಂಗಳೂರು ಕೇಂದ್ರ ಜಿಲ್ಲಾ ಘಟಕದ ಅಧ್ಯಕ್ಷ ಡಾ. ರಿಯಾಜ್ ಪಾಷಾ ಮಾತನಾಡಿ ಬೆಂಗಳೂರು ಗೋವಿಂದರಾಜ ನಗರ ಮಹಿಳಾ ಘಟಕದ ವತಿಯಿಂದ ಜಿಲ್ಲೆಯಲ್ಲಿ ಜನವರಿ ತಿಂಗಳಲ್ಲಿ ಪ್ರಥಮ ಮಹಿಳಾ ಜಾನಪದ ಸಮ್ಮೇಳನವನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.

ಬೆಂಗಳೂರು ಕೇಂದ್ರ ಜಿಲ್ಲೆಯ ಎಲ್ಲಾ ವಿಧಾನ ಸಭಾ ಕ್ಷೇತ್ರ ಮಹಿಳಾ ಘಟಕಗಳನ್ನು ಶೀಘ್ರದಲ್ಲಿ ಸ್ಥಾಪಿಸಲಾಗುವುದು ಹಾಗೂ ಶಾಲಾ ಕಾಲೇಜುಗಳಲ್ಲಿ ಹೆಣ್ಣು ಮಕ್ಕಳಿಗೆ ವಿಶೇಷವಾಗಿ ಜನಪದ ಕಲಾ ಪ್ರಕಾರಗಳ ಕುರಿತು ತರಬೇತಿ ನೀಡಲಾಗುವುದು ಎಂದು ಹೇಳಿದರು.

ಪದಾಪ್ರದಾನ ಸ್ವೀಕರಿಸಿ ಮಾತನಾಡಿದ ಅಧ್ಯಕ್ಷೆ ನಾಗರತ್ನ ಹಿರೇಮಠ್, ಇತ್ತೀಚಿನ ದಿನಗಳಲ್ಲಿ ಪಾಶ್ಚಾತ್ಯ ಸಂಸ್ಕೃತಿ ಭರಾಟೆಯಿಂದ ನಮ್ಮ ಸಂಸ್ಕೃತಿ ಸಂಸ್ಕಾರಗಳು ಕುಸಿಯುತ್ತಿದೆ, ಇದನ್ನು ತಿಳಿಯುವ ಕೆಲಸ ಮಹಿಳಾ ಘಟಕದಿಂದ ಆಗಲಿ ಎಂದು ತಿಳಿಸಿದರು.

ಮಾರ್ಚ್ ತಿಂಗಳ ಒಳಗಾಗಿ
ಪದ್ಮನಾಭನಗರದ ಎಲ್ಲಾ ವಾರ್ಡ್ ಘಟಕಗಳನ್ನು ರಚಿಸಲಾಗುವುದು ಎಂದು ಹೇಳಿದರು.

ಬೆಂಗಳೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ ಅಂಬಿಕಾ ಕನ್ನಡ ಜಾನಪದ ಪರಿಷತ್ ಮಹಿಳಾ ಘಟಕದ ಉದ್ದೇಶ ಹಾಗೂ ಮುಂದಿನ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು.

ಪದಾಧಿಕಾರಿಗಳಿಗೆ ರಾಜ್ಯ ಹಾಗೂ ಜಿಲ್ಲಾ ಅಧ್ಯಕ್ಷರು ಪದ ಪ್ರದಾನ ಮಾಡಿದರು.

ಮೂಲ ಜನಪದ ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ಕಲಾವಿದರು, ಸಾಹಿತಿಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.