ಬೆಂಗಳೂರು: ನಾಡಪ್ರಭು ಕೆಂಪೇಗೌಡ ರಾಷ್ಟ್ರೀಯ ಪ್ರಶಸ್ತಿಯನ್ನು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಭಾರತ ಸರ್ಕಾರದ ಐಸಿಸಿ ಆರ್ ಸದಸ್ಯ ಡಾ ಜಾನಪದ ಎಸ್ ಬಾಲಾಜಿ ಅವರಿಗೆ ನೀಡಿಗೌರವಿಸಲಾಯಿತು.
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಕನ್ನಡ ಸಂಘದ ವತಿಯಿಂದ ಡಾ ಜಾನಪದ ಎಸ್ ಬಾಲಾಜಿ ಅವರಿಗೆ ಈ ಪ್ರಶಸ್ತಿ ಕೊಡಮಾಡಲಾಯಿತು.
ಮಾಜಿ ಮಹಾಪೌರರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹರೀಶ್, ಟಾಟಾ ಇನ್ಸ್ಟಿಟ್ಯೂಟ್ ವಿಜ್ಞಾನಿ ಶ್ರೀರಾಮಚಂದ್ರ ರಾವ್, ಕನ್ನಡ ಸಂಘದ ಅಧ್ಯಕ್ಷರು ಜಗದೀಶ್, ಹಾಗೂ ಸತೀಶ್ ಮತ್ತಿತರ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು.