ಜಾತಿ, ಧರ್ಮದ ಹೆಸರಲ್ಲಿ ಬಿಜೆಪಿ ನಾಯಕರಿಂದ ವಿಷಬೀಜ ಬಿತ್ತುವ ಕೆಲಸ: ಸುಬ್ರಹ್ಮಣ್ಯ ಕಿಡಿ

Spread the love

ಮೈಸೂರು: ಸೌಹಾರ್ಧತೆಯಿಂದ ಇರುವ ನಮಯ ರಾಜ್ಯದಲ್ಲಿ ಜಾತಿ, ಧರ್ಮದ ಹೆಸರಲ್ಲಿ ವಿಷ ಬೀಜ ಬಿತ್ತುವ ಕೆಲಸವನ್ನ ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಅಸಮಾಧಾನ ಪಟ್ಟಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಹಿಂದೆ ಇಡೀ ಕರ್ನಾಟಕದ ಜನತೆ ಇದ್ದಾರೆ. ಆದರೆ ಬಿಜೆಪಿಗರ ವರ್ತನೆ ನಿಲ್ಲದಿದ್ದರೆ, ಜನ ನಿಮ್ಮನ್ನ ಮೂಲೆಗುಂಪು ಮಾಡುತ್ತಾರೆ ಎಂದು ಸುಬ್ರಹ್ಮಣ್ಯ ಎಚ್ಚರಿಸಿದ್ದಾರೆ.

ಮುಸ್ಲಿಮರನ್ನು ತಮ್ಮ ಬೆನ್ನ ಹಿಂದೆ ಇಟ್ಟುಕೊಳ್ಳಲು ಸಿದ್ದರಾಮಯ್ಯ ಬಾನು ಮುಷ್ತಾಕ್‌ರನ್ನ ದಸರಾ ಉದ್ಘಾಟನೆಗೆ ಕರೆದಿದ್ದಾರೆ. ಇದು ನಾಳೆ ಸಿಎಂ ಕುರ್ಚಿಗೆ ಕಂಟಕ ಬಂದಾಗ ಮುಸ್ಲಿಂ ಶಕ್ತಿಯನ್ನು ತಮ್ಮ ಹಿಂದೆ ನಿಲ್ಲಿಸಿಕೊಳ್ಳಲು ಹೆಣೆದಿರುವ ತಂತ್ರವಾಗಿದೆ ಎಂಬ ಪ್ರತಾಪ್‌ ಸಿಂಹ ಹೇಳಿಕೆಗೆ ಸುಬ್ರಮಣ್ಯ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ಅವರ ಬೆನ್ನ ಹಿಂದೆ ಇಡೀ ಕರ್ನಾಟಕದ ಜನತೆ ಇದ್ದಾರೆ. ಒಂದು ಜಾತಿ ಓಲೈಕೆ ಮಾಡುವ ಅಗತ್ಯವಿಲ್ಲ. ಈ ಹಿಂದೆ ರೈತ ಪುಟ್ಟಣ್ಣ, ಕೆ.ಎಸ್‌ ನಿಸಾರ್‌ ಅಹಮದ್‌ ಅವರಿಂದ ದಸರಾ ಉದ್ಘಾಟನೆ ಮಾಡಿಸಿದ್ದು ಸಿದ್ದರಾಮಯ್ಯ ಅವರ ಔಧಾರ್ಯ.

ಅದೇ ರೀತಿಯಲ್ಲಿ ಬೂಕರ್‌ ಪ್ರಶಸ್ತಿ ಪುರಸ್ಕೃತರನ್ನ ಆಹ್ವಾನಿಸಿದ್ದಾರೆ. ಇದರಲ್ಲಿ ಯಾವುದೇ ರೀತಿ ಜಾತಿ ಧರ್ಮ ಬರುವುದಿಲ್ಲ, ಬಿಜೆಪಿಗೆ ಅಹಿಂದ ವರ್ಗಗಳನ್ನ ಕಂಡರೆ ತಾತ್ಸಾರ. ಅದಕ್ಕಾಗಿ ಹಿಂದೂ ಮುಸ್ಲಿಮರನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ ಎಂದು ಸುಬ್ರಮಣ್ಯ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ಪ್ರತಿವರ್ಷ ನಗರ, ತಾಲೂಕು, ಹೋಬಳಿಯ ಗಲ್ಲಿ ಗಲ್ಲಿಗಳಲ್ಲಿ ಗಣೇಶ ಹಬ್ಬವನ್ನ ಆಚರಿಸುತ್ತಾ ಹಿಂದೂ, ಮುಸ್ಲಿಂ, ಕ್ರೈಸ್ತರು ಸೌಹಾರ್ಧತೆ ಮೆರೆಯುತ್ತಿದ್ದಾರೆ. ಇಂತಹ ರಾಜ್ಯದಲ್ಲಿ ಜಾತಿ, ಧರ್ಮದ ಹೆಸರಲ್ಲಿ ವಿಷ ಬೀಜ ಬಿತ್ತುವ ಕೆಲಸವನ್ನು ಬಿಜೆಪಿ ನಾಯಕರು ಮಾಡ್ತಿದ್ದಾರೆ. ಅದರಲ್ಲೂ ಪ್ರತಾಪ್‌ ಸಿಂಹ ಅವರು ಸದಾ ಹಿಂದೂ ಮುಸ್ಲಿಮರ ನಡುವೆ ದ್ವೇಷ ಬಿತ್ತುವಂತಹ, ಕೋಮುದ್ವೇಷಕ್ಕೆ ಕಾರಣವಾಗುವಂತಹ ಹೇಳಿಕೆಗಳನ್ನೇ ನೀಡುತ್ತಿರುತ್ತಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ

ಆರ್‌ಎಸ್‌ಎಸ್‌ ಮುಖ್ಯಸ್ಥರಾದ ಮೋಹನ್‌ ಭಾಗವತ್‌ ಅವರೇ ಹಿಂದೂ ಮುಸ್ಲಿಂ ಐಕ್ಯತೆ ಬಗ್ಗೆ ಮಾತನಾಡಿದ್ದಾರೆ. ಹಿಂದೂಗಳು ಎಲ್ಲವನ್ನೂ ಕಿತ್ತುಕೊಳ್ತಾರೆ ಎಂದು ಭಾವಿಸುವಂತೆ ಮಾಡಲಾಗಿದೆ ಅಂತ ಕಳವಳ ವ್ಯಕ್ತಪಡಿಸಿದ್ದಾರೆ. ಪ್ರತಾಪ್‌ ಸಿಂಹ ಅವರೇ ಕರ್ನಾಟಕ ಜನ ಪ್ರಬುದ್ಧರಾಗಿದ್ದಾರೆ ನಿಮ್ಮ ವರ್ತನೆಗೆ ಸೊಪ್ಪು ಹಾಕುವುದಿಲ್ಲ, ಈ ರೀತಿಯ ವರ್ತನೆ ಮುಂದುವರಿದರೆ, ರಾಜ್ಯದ ಜನ ನಿಮ್ಮನ್ನ ಮೂಲೆ ಗುಂಪು ಮಾಡ್ತಾರೆ. ಎಚ್ಚರವಿರಲಿ ಎಂದು ಬಿ ಸುಬ್ರಹ್ಮಣ್ಯ ತಿಳಿಸಿದ್ದಾರೆ.