ಉಗ್ರರ ದಾಳಿ: ಮೃತರ ಕುಟುಂಬಕ್ಕೆ 50ಲಕ್ಷ ಪರಿಹಾರಕ್ಕೆ ಜೋಗಿ ಮಂಜು ಆಗ್ರಹ

Spread the love

ಮೈಸೂರು: ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಜೀವ ಕಳೆದಕೊಂಡ ಮೂವರು ಕನ್ನಡಿಗರ ಕುಟುಂಬಕ್ಕೆ ತಲಾ ಐವತ್ತು ಲಕ್ಷ ರೂ ಪರಿಹಾರ ನೀಡಬೇಕೆಂದು‌ ಸಿಎಂ ಸಿದ್ದರಾಮಯ್ಯ ಅವರನ್ನು ಮೈಸೂರು ನಗರ ಬಿಜೆಪಿ ಉಪಾಧ್ಯಕ್ಷ ಜೋಗಿ ಮಂಜು ಆಗ್ರಹಿಸಿದ್ದಾರೆ.

ಪಾಕಿಸ್ತಾನಿ ಉಗ್ರರು ದೇಶದೊಳಗೆ ನುಗ್ಗಿಬಂದು ಕ್ರೂರವಾಗಿ ಪ್ರವಾಸಿಗರನ್ನು ಕೊಂದಿದ್ದಾರೆ. ಹೀಗೆ ಹತ್ಯೆಯಾದವರಲ್ಲಿ ಕುಟುಂಬಕ್ಕೆ ಆಧಾರವಾಗಿದ್ದವರೇ ಗುರಿಯಾಗಿದ್ದು ಇದರಿಂದ ಕುಟುಂಬಗಳವರು ಅನಾಥವಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯಸರ್ಕಾರ ಕೇವಲ 10 ಲಕ್ಷ ಪರಿಹಾರ ಘೋಷಿಸಿರುವುದು ನ್ಯಾಯವಾದ ಪರಿಹಾರವಲ್ಲ.ಈ ಹಿಂದೆ ಕೇರಳದ ವ್ಯಕ್ತಿಯೊಬ್ಬರು ರಾಜ್ಯದಲ್ಲಿ ಆನೆ ತುಳಿತದಿಂದ ಸಾವಿಗೀಡಾದಾಗ ರಾಜ್ಯ ಸರ್ಕಾರ ಇಪ್ಪತ್ತ ಐದು ಲಕ್ಷ ರೂ ಪರಿಹಾರ ನೀಡಲಾಗಿತ್ತು ಎಂಬುದನ್ನು ಈ ಸಂದರ್ಭದಲ್ಲಿ ನೆನಪಿಸ ಬಯಸುತ್ತೇನೆ ಪ್ರಕಟಣೆಯಲ್ಲಿ ಜೋಗಿ ಮಂಜು ತಿಳಿಸಿದ್ದಾರೆ.

ಆದ್ದರಿಂದ ಕೂಡಲೇ ಸಿದ್ದರಾಮಯ್ಯ ನವರು ಉಗ್ರರ ಅಟ್ಟಹಾಸದಿಂದ ಅನಾಥರಾಗಿರುವ ಕುಟುಂಬಗಳಿಗೆ ತಲಾ ಐವತ್ತು ಲಕ್ಷ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.