ಮೈಸೂರು, ಜು.2: ಜೆ ಎಸ್ ಎಸ್ ಪ್ರಾಯೋಗಿಕ ಪ್ರಾಥಮಿಕ ಶಾಲೆ ಸರಸ್ವತಿಪುರಂನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಸಮಾರಂಭ ನೆರವೇರಿಸಿತು.
ಮುಖ್ಯ ಶಿಕ್ಷಕರು ಗುರುಸ್ವಾಮಿ ಎಂ.ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವಯಸ್ಕರ ಸಂಪನ್ಮೂಲ, ಭಾರತ್ ಸ್ಕೌಟ್ ಅಂಡ್ ಗೈಡ್ ಜಿಲ್ಲಾ ಆಯುಕ್ತರಾದ
ಡಾ. ಬಿ.ಕೆ. ಅಜಯ್ ಕುಮಾರ್ ಜೈನ್ ಅವರು ಕಾರ್ಯಕ್ರಮ ಉದ್ಘಾಟಿಸಿದರು.
ಶಿಕ್ಷಣ ಸಂಯೋಜನಾಧಿಕಾರಿಗಳಾದ ಮೋಹನ್ ಕುಮಾರ್ ಬಿ.ಎಂ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.
ಸಮಾರಂಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕ ಶಿಕ್ಷಕಿಯರು ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.