ಹಿರಿಯ ಪತ್ರಕರ್ತ‌ ಕೆ.ಬಿ.ಗಣಪತಿ ವಿಧಿವಶ

Spread the love

ಮೈಸೂರು: ಹಿರಿಯ ಪತ್ರಕರ್ತರು, ಮೈಸೂರು ಮಿತ್ರ, ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸಂಪಾದಕರಾದ ಕೆ ಬಿ. ಗಣಪತಿ ಅವರು ವಿಧಿವಶರಾಗಿದ್ದಾರೆ.

ಅವರಿಗೆ‌ 85 ವರ್ಷಗಳಾಗಿತ್ತು.ತೀವ್ರ ಹೃದಯಾಘಾತದಿಂದ‌ ಮೈಸೂರಿನ ಖಾಸಗಿ ಆಸ್ಪತೆಯಲ್ಲಿ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.

ಮೈಸೂರಿನಲ್ಲಿ 50 ವರ್ಷಗಳಿಂದ ಪತ್ರಿಕೋದ್ಯಮಿ ಆಗಿದ್ದರು.ಹಲವಾರು ಪತ್ರಕರ್ತರು ಅವರ ಗರಡಿಯಲ್ಲಿ ಬೆಳೆದಿದ್ದಾರೆ.

ಕೆ.ಬಿ.ಗಣಪತಿ ಅವರು ಕೊಡಗು ಜಿಲ್ಲೆಯಲ್ಲಿ ಜನಿಸಿದರು. ಬಿ.ಎ.(ಕಲೆ), ಬಿ.ಎಲ್.(ಕಾನೂನು), ಮುಂಬೈನಲ್ಲಿ ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ವ್ಯಾಸಂಗ ಮಾಡಿದ್ದರು. 1961-1965ರ ಅವಧಿಯಲ್ಲಿ ಬೆಂಗಳೂರಿನಲ್ಲಿ ಹೈಕೋರ್ಟ್, ಸಿವಿಲ್ ಕೋರ್ಟ್‌ಗಳಲ್ಲಿ ವಕೀಲರಾಗಿ ಸೇವೆ ಸಲ್ಲಿಸಿದ್ದರು.

ಬಳಿಕ ಫ್ರೀಪ್ರೆಸ್ ಜರ್ನಲ್, ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಗಳಲ್ಲಿ ವರದಿಗಾರನಾಗಿ ಕೆಲಸ ನಿರ್ವಹಿಸಿ, 1978ರಲ್ಲಿ ಸ್ಟಾರ್ ಆಫ್ ಮೈಸೂರು ಸ್ಥಾಪಿಸಿದರು. ಆದರ್ಶವಾದಿ, ಅಮೆರಿಕಾ- ಆನ್ ಏರಿಯಾ ಆಫ್ ಲೈಟ್ ಇನ್ ಇಂಗ್ಲಿಷ್, ದಿ ಕ್ರಾಸ್ ಆ್ಯಂಡ್ ಕೂರ್ಗ್ಸ್, ಸೇರಿದಂತೆ ಹಲವು ಪುಸ್ತಕಗಳನ್ನು ಬರೆದಿದ್ದಾರೆ.

ಕೆ.ಬಿ.ಗಣಪತಿ ಅವರಿಗೆ ವಿವಿಯಿಂದ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ.

ಲೈಫ್ ಅಂಡ್ ಟೈಮ್ಸ್ ಎಂಬ ಪುಸ್ತಕವನ್ನು ಬರೆದಿದ್ದಾರೆ. ಸ್ಟಾರ್ ಆಫ್ ಮೈಸೂರು ಮತ್ತು ಮೈಸೂರು ಮಿತ್ರ ಪತ್ರಿಕೆಗಳ ಸಂಸ್ಥಾಪಕ-ಸಂಪಾದಕರಾದ ಅವರು ಬಾಂಬೆಯಿಂದ ಪತ್ರಿಕೋದ್ಯಮದಲ್ಲಿ ಡಿಪ್ಲೊಮಾ ಪಡೆದಿದ್ದರು.

1961- 1965ರವರೆಗೆ ಬೆಂಗಳೂರಿನಲ್ಲಿ ವಕೀಲರಾಗಿ, 1970ರಲ್ಲಿ ಪೂನಾದಲ್ಲಿ ಜಾಹೀರಾತು ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾಗಿ, ಮೈಸೂರು ಕೇಂದ್ರ ಭಾರತೀಯ ವಿದ್ಯಾಭವನದ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

1993 ಮತ್ತು 1995ರ ನಡುವೆ ಕರ್ನಾಟಕ ಪತ್ರಿಕಾ ಅಕಾಡೆಮಿ ಸದಸ್ಯರಾಗಿ ಸೇವೆ ಸಲ್ಲಿಸಿದರು. 2001ರಲ್ಲಿ ಅವರಿಗೆ ಕರ್ನಾಟಕ ಪತ್ರಿಕಾ ಅಕಾಡೆಮಿ ಪ್ರಶಸ್ತಿ ನೀಡಲಾಯಿತು.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷರೂ ಆಗಿದ್ದರು. ಆಗ್ನೇಯ ಏಷ್ಯಾ, ಅಮೆರಿಕ, ಇಸ್ರೇಲ್, ಈಜಿಪ್ಟ್, ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾಗಳಿಗೆ ಭೇಟಿ ನೀಡಿದ್ದಾರೆ. ಆರು ವರ್ಷಗಳ ಕಾಲ ಅವರು ಕಾವೇರಿ ಕಾಲೇಜಿನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಹಲವಾರು ಕಾದಂಬರಿಗಳನ್ನು ಬರೆದು ಪ್ರಕಟಿಸಿದ್ದಾರೆ. 1992ರಲ್ಲಿ ಕನ್ನಡದಲ್ಲಿ ‘ಆದರ್ಶವಾದಿʼ ಎಂಬ ಕಾದಂಬರಿಯನ್ನು ಬರೆದರು. ಅದರ ಮುಂದಿನ ವರ್ಷ (1993) ಇಂಗ್ಲಿಷ್‌ನಲ್ಲಿ ‘ಅಮೇರಿಕಾ – ಆನ್ ಏರಿಯಾ ಆಫ್ ಲೈಟ್ʼ ಎಂಬ ಪ್ರವಾಸ ಕಥನ ಬರೆದರು. 1994ರಲ್ಲಿ ಇಂಗ್ಲಿಷ್‌ನಲ್ಲಿ ‘ದಿ ಕ್ರಾಸ್ ಅಂಡ್ ದಿ ಕೂರ್ಗ್ಸ್ʼ ಎಂಬ ಮತ್ತೊಂದು ಕಾದಂಬರಿಯನ್ನು ಬರೆದರು.

ಇದನ್ನು ನಂತರ ಕನ್ನಡದಲ್ಲಿಯೂ ಬರೆದರು. 2003ರಲ್ಲಿ ‘ಅಬ್ರಕಾಡಬ್ರಾʼ ಎಂಬ ಆಯ್ದ ಅಂಕಣಗಳ ಸಂಗ್ರಹ ಪ್ರಕಟಿಸಿದರು. 2009ರಲ್ಲಿ, ಅವರು ‘ಗಾಂಧೀಸ್‌ ಎಪಿಸ್ಟಲ್‌ ಟು ಒಬಾಮಾʼ ಎಂಬ ಇಂಗ್ಲಿಷ್‌ ಕೃತಿ ಬರೆದಿದ್ದರು.

ಮಹಾನ್ ಸಾಧಕರಾದ ಕೆ.ಬಿ.ಗಣಪತಿ ಅವರ ನಿಧನಕ್ಕೆ ಅನೇಕ ಪತ್ರಕರ್ತರು,ವರದಿಗಾರರು,
ಅಭಿಮಾನಿಗಳು, ಗಣ್ಯರು ತೀವ್ರ ಸಂತಾಪ‌ ವ್ಯಕ್ತಪಡಿಸಿದ್ದಾರೆ.