ಕಬಿನಿಯಲ್ಲಿ ಪ್ರವಾಹ: ಮುನ್ನೆಚ್ಚರಿಕೆ ವಹಿಸಲು ಸೂಚನೆ

ಮೈಸೂರು: ಕಬಿನಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿದ್ದು, ಜಲಾಶಯವು ಪ್ರಸ್ತುತ ಭರ್ತಿಯಾಗುವ ಹಂತದಲ್ಲಿದೆ.

ಇಂದು ಪ್ರಸ್ತುತ ಕಬಿನಿ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ 18000 ಕ್ಯೂಸೆಕ್ ಗೂ ಹೆಚ್ಚು ಇದ್ದು, ಜಲಾನಯನ ಪ್ರದೇಶಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಪ್ರಯುಕ್ತ ಕಬಿನಿ ಜಲಾಶಯದಿಂದ 5000 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.

ಯಾವುದೇ ಕ್ಷಣದಲ್ಲಾದರೂ ಇನ್ನೂ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಹರಿಸುವ ಸಾಧ್ಯತೆ ಇರುತ್ತದೆ ಹಾಗಾಗಿ ಈ ಭಾಗದ ಜನತೆ ಎಚ್ಚರ ವಹಿಸಬೇಕೆಂದು ಕಬಿನಿ ಜಲಾಶಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಎ.ಚಂದ್ರಶೇಖರ್ ಮನವಿ ಮಾಡಿದ್ದಾರೆ.

ಕಬಿನಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡೂ ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ, ಸುರಕ್ಷಿತ ಸ್ಥಳಗಳಿಗೆ ತೆರಳಬೇಕೆಮನದು ಕೋರಲಾಗಿದೆ.