ಕದನ ವೀರ ಚಿತ್ರಕ್ಕೆ‌ ಸಿ. ಹೆಚ್ ವಿಜಯಶಂಕರ್, ಯದುವೀರ್ ಶುಭ ಹಾರೈಕೆ

Spread the love

ಮೈಸೂರು, ಆ.23: ಯೋಧರ ತ್ಯಾಗ, ಬಲಿದಾನ, ಶೌರ್ಯದ ಬಗ್ಗೆ ನಿರ್ಮಾಣ ಆಗಿರುವ ಕದನ ವೀರ ಚಲನ ಚಿತ್ರಕ್ಕೆ ರಾಜ್ಯಪಾಲ ಸಿ. ಹೆಚ್ ವಿಜಯಶಂಕರ್ ಮತ್ತು ಸಂಸದ ಯದುವೀರ್ ಶುಭ ಹಾರೈಸಿದರು.

ಭವಿಷ್ಯದ ಸೈನಿಕರಾದ ಸೈನಿಕ ಅಕಾಡೆಮಿ (ರಿ) ಮೈಸೂರು ವತಿಯಿಂದ ಕದನ ವೀರ ಚಲನಚಿತ್ರ ನಿರ್ಮಾಣ ಮಾಡಲಾಗಿದೆ.

ಒಂದು ವರ್ಷಗಳ ಸತತ ಪ್ರಯತ್ನ ಪರಿಶ್ರಮದಿಂದ ಎಸ್‌ ಎ ಎಂ ಸಂಸ್ಥಾಪಕರು ಮತ್ತು ಎಕ್ಸ್ ಬ್ಲ್ಯಾಕ್ ಕ್ಯಾಟ್ ಕಮಾಂಡೋ ಶ್ರೀಧರ ಸಿ ಎಂ ಅವರ ಪ್ರೋತ್ಸಾಹದಿಂದ, ಸೈನಿಕರ ಮೇಲೆ ಅಪಾರ ಅಭಿಮಾನ ಇರುವ ಎಸ್‌ ಎ ಎಂ ಅಭ್ಯರ್ಥಿ ಜೀವನ ಚಿಕ್ಕಬಂಡಾರ ಅವರ ನಿರ್ದೇಶನ ಹಾಗೂ ನಿರ್ಮಾಪಕರಾದ ಅನಿತಾ ಶ್ರೀಧರ ಅವರ ಸಹಕಾರದಿಂದ ನನ್ನ ಮಣ್ಣು, ನನ್ನ ಜಲ, ನನ್ನ ಗಾಳಿ, ನನ್ನ ಜನ, ದೇಶ ಎಂಬ ಕಿಚ್ಚು ಯುವಪೀಳಿಗೆಗೆ ತಿಳಿಯಬೇಕೆಂದು ಈ ಚಿತ್ರ ನಿರ್ಮಿಸಲಾಗಿದೆ.

ಪೋಷಕರಿಗೆ ಹೆಚ್ಚಿಸಬೇಕೆಂಬ ಸೈನಿಕರ ತ್ಯಾಗ ಬಲಿದಾನ ಪ್ರತಿಯೊಬ್ಬರೂ ತಿಳಿಯಬೇಕು, ಸೈನಿಕರ ಸಾಹಸ ಸಾಧನೆಯು ಶಾಲೆಯ ಪಠ್ಯ ಪುಸ್ತಕಗಳಲ್ಲಿ ಪ್ರಕಟಿಸಬೇಕು, ತನಗಾಗಿ ಅಲ್ಲ, ತನ್ನವರಿಗಾಗಿ ಸೇವೆ ಮಾಡುತ್ತಿರುವ ಸೈನಿಕನಿಗೆ ಅಪಾರ ಗೌರವ ಸಿಗಬೇಕು, ಸೈನಿಕರಿಗೆ ಉತ್ಸಾಹ ಧೈರ್ಯ ಹೆಚ್ಚಿಸುವ ಕೆಲಸ ನಾವುಗಳು ಮಾಡಬೇಕೆಂಬ ಉದ್ದೇಶದಿಂದ ಈ ಚಲನ ಚಿತ್ರವನ್ನು ಭವಿಷ್ಯದ ಸೈನಿಕರಿಂದಲೇ ನಿರ್ಮಿಸಲಾಗಿದೆ.

ಈ ಕದನ ವೀರ ಚಲನ ಚಿತ್ರಕ್ಕೆ ಮೇಘಾಲಯ ರಾಜ್ಯಪಾಲರಾದ ಸಿ ಹೆಚ್ ವಿಜಯಶಂಕರ್ ಹಾಗೂ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಚಿತ್ರದ ಪೋಸ್ಟರ್ ಬಿಡುಗಡೆಗೊಳಿಸಿ ಶುಭ ಹಾರೈಸು ಎಸ್ ಎ ಎಂ ಅಭ್ಯರ್ಥಿಗಳಿಗೂ ಶುಭ ಕೋರಿದರು.

ಸೆಪ್ಟೆಂಬರ್ 1ರಂದು ಭಾನುವಾರ ಕರ್ನಾಟಕ ಕಲಾ ಮಂದಿರ ದಲ್ಲಿ ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ 5 ಕದನ ವೀರ‌‌ ಚಲನ ಚಿತ್ರದ ಶೋ ಇಡಲಾಗಿದೆ.

ಈ ಚಲನ ಚಿತ್ರದ ಟ್ರೇಲರ್ ನ್ನೂ YouTube channel Sainik Academy Mysuru ನಲ್ಲಿ ವೀಕ್ಷಿಸಬಹುದು ಎಂದು
ಸೈನಿಕ ಅಕಾಡೆಮಿ ಸಂಸ್ಥಾಪಕರಾದ ಶ್ರೀಧರ್ ಸಿ ಎಂ ತಿಳಿಸಿದ್ದಾರೆ.