ಮೈಸೂರು: ಜೀವದಾರ ರಕ್ತ ನಿಧಿ ಕೇಂದ್ರ ಹಾಗೂ ಕೃಷ್ಣರಾಜ ಯುವ ಬಳಗದ ವತಿಯಿಂದ ಶ್ರೀ ಭಕ್ತ ಕನಕದಾಸರ 537 ನೇ ಜಯಂತಿಯ ಪ್ರಯುಕ್ತ ಜನರಿಗೆ ಹೋಳಿಗೆ ವಿತರಿಸಲಾಯಿತು.
ಮೈಸೂರಿನ ಚಾಮರಾಜ ಜೋಡಿ ರಸ್ತೆಯಲ್ಲಿ
ಜೀವದಾರ ರಕ್ತ ನಿಧಿ ಕೇಂದ್ರ ಹಾಗೂ ಕೃಷ್ಣರಾಜ ಯುವ ಬಳಗದವರು
ಸಾರ್ವಜನಿಕರಿಗೆ ಹೋಳಿಗೆ ವಿತರಿಸಿ ಖುಷಿ ಪಟ್ಟರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಎಂ. ಕೆ ಸೋಮಶೇಖರ್, ಪ್ರದೇಶ ಕುರುಬರ ಸಂಘದ ಅಧ್ಯಕ್ಷರಾದ ಸುಬ್ಬಣ್ಣ, ಶಿವಣ್ಣ, ಬಿಜೆಪಿ ಮುಖಂಡ ಶಿವಕುಮಾರ್,ನಗರ ಪಾಲಿಕೆ ಮಾಜಿ ಸದಸ್ಯರಾದ ಗೋಪಿ, ಕೆ ಆರ್ ಬ್ಯಾಂಕ್ ಅಧ್ಯಕ್ಷ ಬಸವರಾಜ್ ಬಸಪ್ಪ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಆರ್ ಕೆ ರವಿ, ಮಂಜುನಾಥ್, ಮಂಜ್ಜಪ, ಪುರುಷೋತ್ತಮ್ ಮತ್ತಿತರರು ಹಾಜರಿದ್ದರು.
