ಕಾಂಗರೂ ನಾಡಿನಲ್ಲಿ ವಿಕ್ರಂ ಅಯ್ಯಂಗಾರ್ ಗೆ ಕನ್ನಡ ಡಿಂಡಿಮ ಪ್ರಶಸ್ತಿ

Spread the love

ಮೈಸೂರು: ಮೆಲ್ಬೋರ್ನ್ ಕನ್ನಡ ಸಂಘವು
ಆಸ್ಟ್ರೇಲಿಯಾದ ಮೆಲ್ಬೋರ್ನ್ ನಗರದ ಸ್ಟ್ರಿಂಗ್ವೆಲ್ ಟೌನ್ ಹಾಲ್ ನಲ್ಲಿ
ನ 24 ರಂದು 69 ನೆ ಕನ್ನಡ ರಾಜ್ಯೋತ್ಸವ ಸಮಾರಂಭ ಹಮ್ಮಿಕೊಂಡಿದೆ.

ಅಂದು ರಾಜ್ಯೋತ್ಸವ ಸಮಾರಂಭದ ಅಂಗವಾಗಿ ನಡೆಯಲಿರುವ ಕಾಂಗರೂ ನಾಡಿನಲ್ಲಿ ಕನ್ನಡ ಡಿಂಡಿಮ ಕನ್ನಡ ಕಾರ್ಯಕ್ರಮದಲ್ಲಿ ಕೆಎಂಪಿ ಕೆ ಟ್ರಸ್ಟ್ ಅಧ್ಯಕ್ಷರು ಹಾಗೂ ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕ ವಿಕ್ರಂ ಅಯ್ಯಂಗಾರ್ ಅವರಿಗೆ ಕನ್ನಡ ಡಿಂಡಿಮ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಮೈಸೂರಿನಲ್ಲಿ 18 ವರ್ಷದಿಂದ ನಿರಂತರವಾಗಿ ಹಲವಾರು ಸಂಘಟನೆಯಲ್ಲಿ ತೊಡಗಿಕೊಂಡು ನಿರಂತರ ಸೇವೆ ಮಾಡುತ್ತಿರುವ ವಿಕ್ರಂ ಅಯ್ಯಂಗಾರ್ ಅವರಿಗೆ ಸಂಘಟನಾ ಕ್ಷೇತ್ರದಿಂದ ಕನ್ನಡ ಡಿಂಡಿಮ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಕಾರ್ಯಕ್ರಮದ ಆಯೋಜಕರಾದ ಜೆ ಎಚ್ ಅನಿಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.