ಎಲ್ಲಾ ಕ್ಷೇತ್ರಗಳಲ್ಲಿ ಬೆಳೆಯಲಿ ಕನ್ನಡ ಬೆಳೆಯಲಿ-ಖುಷಿ ವಿನು

Spread the love

ಮೈಸೂರು: ಮೈಸೂರಿನ ‌ಅಧ್ಯಯನ ಶಾಲೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕೃಷ್ಣರಾಜೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಬಸವರಾಜು ಮತ್ತಿತರ
ಗಣ್ಯರು ರಾಷ್ಟ್ರಧ್ವಜಾರೋಹಣ, ನಾಡದ್ವಜಾರೋಹಣ, ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮಕ್ಕಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಕರ ಗಮನ ಸೆಳೆಯಿತು.

ಬಸವರಾಜು ಅವರು, ಕನ್ನಡ ರಾಜ್ಯೋತ್ಸವದ ಕುರಿತು ಮಾತನಾಡಿ ಮಕ್ಕಳಿಗೆ ಶುಭ ಕೋರಿದರು.

ಮಿಸ್ಸೆಸ್ ಇಂಡಿಯಾ‌ ರನ್ನರ್ ಅಪ್
ಖುಷಿ ವಿನು ಅವರು ಕನ್ನಡ ಎಲ್ಲಾ ಕಡೆ ಎಲ್ಲಾ ಕ್ಷೇತ್ರಗಳಲ್ಲಿ ಬೆಳೆಯಲಿ ,ಕನ್ನಡ ಇತಿಹಾಸ ಪುಟಗಳಲ್ಲಿ ಸೇರುವಂತೆ ಮಾಡಬೇಕು ಎಂದು ಕರೆ ನೀಡಿದರು.

ಶಾಲೆಯ ಕಾರ್ಯದರ್ಶಿ ಎಂ ಪಾರ್ವತಿ ದೇವಿ ಅವರು ಕನ್ನಡ ಕಲಿಸಿ ,ಕನ್ನಡ ಮಾತನಾಡೋಣ ಕನ್ನಡವನ್ನು ಬೆಳೆಸೋಣ ಕನ್ನಡ ನಾಡಿನಲ್ಲಿ ಹುಟ್ಟಿರುವುದು ಹೆಮ್ಮೆ ಎಂದು ಹೇಳಿದರು.

ಶಾಲೆಯ ಮುಖ್ಯೋಪಾಧ್ಯಾಯರಾದ ಹೆಚ್.ಎಂ. ಪುಟ್ಟಸ್ವಾಮಿಗೌಡರು ಕನ್ನಡವನ್ನು ಕಡ್ಡಾಯವಾಗಿ ಮಾತನಾಡೋಣ ಎಂದು ಹೇಳಿ,ಕನ್ನಡ ನಾಡಿನ ಮಹತ್ವ ಮತ್ತು ಕನ್ನಡ ಭಾಷೆಯ ಮಹತ್ವವನ್ನು ತಿಳಿಸಿಕೊಟ್ಟರು.

ಆನಂದ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳಿಗೆ ಶುಭ ಕೋರಿದರು .

ಈ ಸಂದರ್ಭದಲ್ಲಿ ಮಕ್ಕಳಿಗೆ ವೇಷಭೂಷಣ, ಚಿತ್ರಕಲಾ, ಪ್ರಬಂಧ ಸ್ಪರ್ಧೆ ಆಯೋಜಿಸಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಲಾಯಿತು.

ಕಾರ್ಯಕ್ರಮದಲ್ಲಿ ಮಲೆ ಮಹದೇಶ್ವರ ಸೇವಾ ಸಂಸ್ಥೆಯ ಅಧ್ಯಕ್ಷರಾದ ಮಹಾನ್, ಶಾಲೆಯ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು,ಶಿಕ್ಷಕ ವೃಂದ ಮತ್ತು ಮಕ್ಕಳು ಭಾಗವಹಿಸಿದ್ದರು.