ಬೆಂಗಳೂರು: ಕೆ.ಎ.ಎಸ್ ಪರೀಕ್ಷಾರ್ಥಿಗಳ ಪ್ರಶ್ನೆ ಪತ್ರಿಕೆಗಳಲ್ಲಿನ ನಿರಂತರ ಭಾಷಾಂತರ ಲೋಪ ಸೇರಿದಂತೆ ಇತರೆ ಬೇಡಿಕೆಗಳಿಗೆ ಒತ್ತಾಯಿಸಿ ನಡೆಸುತ್ತಿರುವ ಪ್ರತಿಭಟನೆಗೆ ಆಮ್ ಆದ್ಮಿ ಪಕ್ಷ ಬೆಂಬಲ ಸೂಚಿಸಿತು.
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಕೆ.ಎ.ಎಸ್ ಪರೀಕ್ಷಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗೆ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಸೇರಿದಂತೆ ಪಕ್ಷದ ಅನೇಕ ಹಿರಿಯ ನಾಯಕರು ಹಾಗೂ ಕಾರ್ಯಕರ್ತರು ಸಾಥ್ ನೀಡಿದರು.
ಈ ವೇಳೆ ಕೆ.ಎ.ಎಸ್ ಪರೀಕ್ಷಾರ್ಥಿಗಳೊಂದಿಗೆ ಸೇರಿ ಆಪ್ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು.

ಬೇಕೇ ಬೇಕು ನ್ಯಾಯ ಬೇಕು ಎಲ್ಲಿಯವರೆಗೂ ಹೋರಾಟ ಗೆಲ್ಲುವವರೆಗೂ ಹೋರಾಟ,ದಿಕ್ಕಾರ,ದಿಕಾರ ಕೆ ಪಿ ಎಸ್ ಸಿ ಗೆ ದಿಕ್ಕಾರ ಹೀಗೆ ಅನೇಕ ಘೋಷಣೆಗಳನ್ನು ಮುಖ್ಯ ಮಂತ್ರಿ ಚಂದ್ರು ಸೇರಿದಂತೆ ಎಲ್ಲಾ ಪ್ರತಿಭಟನಾ ನಿರತರು ಕೂಗಿದರು.
ಇದೇ ವೇಳೆ ಮುಖ್ಯ ಮಂತ್ರಿ ಚಂದ್ರು ಅವರು ಪ್ರತಿಭಟನಾ ನಿರತ ಪರೀಕ್ಷಾರ್ಥಿಗಳಿಗೆ ಕನ್ನಡದ ಶಾಲು ಹೊದಿಸಿ ಪ್ರೋತ್ಸಾಹಿಸಿದ್ದು ಕಂಡುಬಂದಿತು.