ಕೆಂಪೇಗೌಡರ ಕೊಡುಗೆ ರಾಜ್ಯಕ್ಕೆ ದೇಶಕ್ಕೆ ಅಪಾರ-ಸಿ. ಎನ್ ಮಂಜೇಗೌಡ

Spread the love

ಮೈಸೂರು: ಕೆಂಪೇಗೌಡರ ಕೊಡುಗೆ ರಾಜ್ಯಕ್ಕೆ ದೇಶಕ್ಕೆ ಅಪಾರ ಎಂದು ವಿಧಾನ ಪರಿಷತ್ ಸದಸ್ಯ ಸಿ. ಎನ್ ಮಂಜೇಗೌಡ ತಿಳಿಸಿದರು.

ಮೈಸೂರಿನ ಅಗ್ರಹಾರ ವೃತ್ತದಲ್ಲಿ ಕರ್ನಾಟಕ ಸೇನಾ ಪಡೆ ವತಿಯಿಂದ ಹಮ್ಮಿಕೊಂಡಿದ್ದ ನಾಡು ಕಟ್ಟಿದ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿ ವೇಳೆ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.

ಕೆಂಪೇಗೌಡರು ಆಗಿನ ಕಾಲದಲ್ಲಿಯೇ ಎಲ್ಲಾ ವರ್ಗದ ಜನರಿಗೆ ಅವರವರ ಕಸುಬುಗಳಿಗೆ ತಕ್ಕಂತೆ ಬಳೆಪೇಟೆ, ಕಾಟನ್ ಪೇಟೆ, ಚಿಕ್ಕಪೇಟೆ, ದೊಡ್ಡಪೇಟೆ, ಅಕ್ಕಿಪೇಟೆ, ಮುಸ್ಲಿಮರಿಗೆ ಸುಲ್ತಾನ್ ಪೇಟೆ ಈ ರೀತಿ ಎಲ್ಲಾ ಸಮುದಾಯವರಿಗೂ ಸುಮಾರು 64 ಕ್ಕೂ ಹೆಚ್ಚು ಪೇಟೆಗಳನ್ನು ನಿರ್ಮಿಸಿ ಕೊಟ್ಟರು. ಈಗ ನಾವೆಲ್ಲ ಕೆಂಪೇಗೌಡರ ತತ್ವ ಆದರ್ಶಗಳನ್ನು ಮೈಗೂಡಿಸಿಕೊಂಡು ಜನರ, ಬಡವರ ಪರವಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಕರ್ನಾಟಕ ಸೇನಾ ಪಡೆ ತೇಜೇಶ್ ಲೋಕೇಶ್ ಗೌಡ ಮಾತನಾಡಿ, ನಮ್ಮ ರಾಜ್ಯ ದೇಶವನ್ನಾಳಿದ ಹಲವಾರು ನಾಯಕರುಗಳಲ್ಲಿ ಮಹಾರಾಜರಗಳು, ಸುಲ್ತಾನರು, ಮೊಘಲರು ಇವರೆಲ್ಲರುಗಳಲ್ಲಿ ಅತ್ಯಂತ ಕ್ರಿಯಾಶೀಲ ವ್ಯಕ್ತಿತ್ವವುಳ್ಳ, ಜನಪರ ಕಾಳಜಿ ಉಳ್ಳ ಮಹಾನ್ ವ್ಯಕ್ತಿ ನಾಡಪ್ರಭು ಕೆಂಪೇಗೌಡರು ಎಂದು ಬಣ್ಣಿಸಿದರು.

ಎಲ್ಲಾ ವರ್ಗದವರನ್ನು ಸಮನಾಗಿ ಕಂಡು ಬೆಂಗಳೂರು ಸುತ್ತಮುತ್ತ ಸಾವಿರಕ್ಕೂ ಹೆಚ್ಚು ಕೆರೆಗಳನ್ನು ನಿರ್ಮಿಸಿದರು ಎಂದು ಹೇಳಿದರು.

ಕೆಂಪೇಗೌಡರ ಸೊಸೆ ಲಕ್ಷ್ಮೀದೇವಿ ಅವರು ಕೋಟೆಯ ದಿಡ್ಡಿ ಬಾಗಿಲು ನಿಲ್ಲದಾಗ ತಾವೇ ಆಹುತಿ ಆಗಿ ತಮ್ಮ ಜೀವವನ್ನು ಅರ್ಪಿಸಿಕೊಂಡರು,ಅಂತಹ ವ್ಯಕ್ತಿತ್ವ ಕೆಂಪೇಗೌಡರ ಕುಟುಂಬದ್ದು. ಇಂತಹ ಮಹನೀಯರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನೆರದಿದ್ದವರಿಗೆ ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ರಾಜ್ಯಾಧ್ಯಕ್ಷ ಸಿ.ಜಿ ಗಂಗಾಧರ್ ಅವರು ಸಿಹಿ ವಿತರಣೆ ಮಾಡಿದರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಡ್ಡೀಕೆರೆ ಗೋಪಾಲ್, ಕಾವೇರಿ ಕ್ರಿಯಾ ಸಮಿತಿ ಅಧ್ಯಕ್ಷ ಎಸ್ ಜಯಪ್ರಕಾಶ್, ಕಾಂಗ್ರೆಸ್ ಮುಖಂಡರಾದ ಎನ್ ಎಂ ನವೀನ್ ಕುಮಾರ್, ನಗರ ಪಾಲಿಕೆ ಮಾಜಿ ಸದಸ್ಯ ಪ್ರಶಾಂತ್ ಗೌಡ, ಲಕ್ಷ್ಮೀದೇವಿ, ಚೇತನ್ ಪ್ರಭುಶಂಕರ್, ಶಾಂತರಾಜೇಅರಸ್, ಹನುಮಂತಯ್ಯ, ಭಾಗ್ಯಮ್ಮ, ಸಿಂದುವಳ್ಳಿ ಶಿವಕುಮಾರ್, ಬೋಗಾದಿ ಸಿದ್ದೇಗೌಡ, ಶಿವಲಿಂಗಯ್ಯ, ಸುಶೀಲ ನಂಜಪ್ಪ, ಗುರುರಾಜ್, ಕೃಷ್ಣೇಗೌಡ , ಕುಮಾರ್, ದರ್ಶನ್ ಗೌಡ, ನಂದಕುಮಾರ್, ಗಣೇಶ್ ಪ್ರಸಾದ್, ಪ್ರಭಾಕರ, ರಘು ಅರಸ್, ರವಿ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.