ಕಿಚ್ಚ ಸುದೀಪ್ ಹುಟ್ಟುಹಬ್ಬ:ಹಣ್ಣು,ದಿನಸಿ ಸಾಮಗ್ರಿ ವಿತರಣೆ

ಮೈಸೂರು: ಖ್ಯಾತ ನಟ ಕಿಚ್ಚ ಸುದೀಪ್ ಹುಟ್ಟು ಹಬ್ಬದ ಅಂಗವಾಗಿ ಮೈಸೂರಿನ ರಾಮಾನುಜ ರಸ್ತೆಯಲ್ಲಿರುವ ಜೆ.ಎಸ್.ಎಸ್. ಸಂಸ್ಥೆಯ ವಿಕಲಚೇತನ ಉದ್ಯೋಗಸ್ಥ ಮಹಿಳೆಯರು ಹಾಗೂ ವಿದ್ಯಾರ್ಥಿನಿಯರ ನಿಲಯದವರಿಗೆ ಹಣ್ಣು, ದಿನಸಿ ಸಾಮಗ್ರಿ ವಿತರಿಸಲಾಯಿತು.

ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗದ ವತಿಯಿಂದ ಹಣ್ಣು, ದಿನಸಿ ಸಾಮಗ್ರಿ ವಿತರಿಸಲಾಯಿತು.

ಈ ವೇಳೆ ಮಾತನಾಡಿದ ಜೆಡಿಎಸ್ ಕಾರ್ಯಾದಕ್ಷ ಪ್ರಕಾಶ್ ಪ್ರಿಯದರ್ಶನ್
ಸ್ಯಾಂಡಲ್‌ ವುಡ್ ಅಷ್ಟೇ ಅಲ್ಲದೇ ಬಾಲಿವುಡ್‌ ಸಿನಿಮಾಗಳಲ್ಲೂ ತಮ್ಮ ಅಮೋಘ ಅಭಿನಯದ ಮೂಲಕ ರಾಷ್ಟ್ರೀಯ, ಅಂತರರಾಷ್ಟ್ರೀಯ ಮಟ್ಟದಲ್ಲಿ ಕನ್ನಡದ ಕೀರ್ತಿ ಪತಾಕೆ ಹಾರಿಸುತ್ತಿರುವ ಕಿಚ್ಚ ಸುದೀಪ್ ಅವರು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಹಾರೈಸಿದರು.

ಈ ವೇಳೆ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹೋಮದೇವ,ಸುಬ್ರಮಣ್ಯ, ಛಾಯಾ, ಯಶವಂತ್ ಕುಮಾರ್, ವೀರಭದ್ರ ಸ್ವಾಮಿ, ಚಂದ್ರಶೇಖರ್ , ಮಹೇಶ್, ಮಹದೇವ್,ಎಸ್‌.ಪಿ. ಅಕ್ಷಯ್ ಪ್ರಿಯಾದರ್ಶನ್, ಹರ್ಷಿತ್ ಎಸ್ ನಾಗೇಶ್ ಮತ್ತಿತರರು ಉಪಸ್ಥಿತರಿದ್ದರು.