ಮೈಸೂರು: ಕರ್ನಾಟಕದ ಏಕೀಕರಣಕ್ಕೆ ಆಲೂರು ವೆಂಟಕರಾಯರ ಕೊಡುಗೆ ಅಪಾರವಾಗಿದ್ದು ನಾಡಿನ ಗತ ವೈಭವದ ಬಗ್ಗೆ ತಿಳಿಸಿಕೊಡುವುದರ ಜೊತೆಗೆ ಏಕೀಕರಣದ ಕಿಚ್ಚನ್ನು ಹತ್ತಿಸಿ ಬಡಿದೆಬ್ಬಿಸಿದ ಕೀರ್ತಿ ಸಲ್ಲುತ್ತದೆ ಎಂದು ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪಾಯಿ ತಿಳಿದರು.
ಕೆಎಂಪಿಕೆ ಟ್ರಸ್ ವತಿಯಿಂದ
ನಗರದ ಚಾಮುಂಡಿಪುರಂ ವೃತ್ತದಲ್ಲಿರುವ ತಗಡೂರು ರಾಮಚಂದ್ರರಾವ್ ಉದ್ಯಾನವನದಲ್ಲಿ ಆಯೋಜಿಸಿದ್ದ ಆಲೂರು ವೆಂಕಟರಾಯರ 145 ನೇ ಜನುಮದಿನ ಆಚರಣೆಯಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಟ್ಟು ಅವರು ಮಾತನಾಡಿದರು,
ಏಕೀಕರಣಕ್ಕೂ ಮೊದಲ ಕರ್ನಾಟಕ ರಾಜ್ಯ ಹೈದರಾಬಾದ್ ಕರ್ನಾಟಕ ಮುಂಬೈ ಕರ್ನಾಟಕ, ಮದ್ರಾಸ್ ಕರ್ನಾಟಕಗಳಲ್ಲಿ ಹರಿದು ಹಂಚಿ ಹೋಗಿತ್ತು. ಅದರಂತೆ ಕನ್ನಡ ಪ್ರಾಥಮಿಕ ಶಾಲೆಗಳಲ್ಲಿ ಹೆಚ್ಚಾಗಿ ಮರಾಠಿ ಶಿಕ್ಷಣ ನೀಡಲಾಗುತ್ತಿತ್ತು. ಇದನ್ನು ಮನಗಂಡ ವೆಂಕಟರಾಯರು ಏಕೀಕರಣ ಚಳವಳಿ ನಡೆಸಲು ತಮ್ಮ ಶಾಲಾ ವಿದ್ಯಾರ್ಥಿ ಸಮಯದಲ್ಲೇ ಮುಂದಾಗಿದ್ದರು
ನಾಡಿನಲ್ಲಿ ರಾಜ್ಯದ ಒಗ್ಗೂಡಿಕೆಗೆ ಪೂರಕ ಕಾರ್ಯಕ್ರಮ ನಡೆಸಿದರು ಎಂದು ಸ್ಮರಿಸಿದರು.
ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾದ ಚಂದ್ರಶೇಖರ್ ಮಾತನಾಡಿ, ವೆಂಕಟರಾಯರು ರಾಷ್ಟ್ರೀಯ ಶಾಲೆ ಪ್ರಾರಂಭಿಸಿ ಕನ್ನಡಿಗರಿಗೆ ಸ್ವ ಉದ್ಯೋಗ ಮಾಡುವ ಅವಕಾಶ ಮಾಡಿಕೊಟ್ಟಿದ್ದರು. ಕರ್ನಾಟಕ ಏಕೀಕರಣ ಪರಿಷತ್ ಮೂಲಕ ಕರ್ನಾಟಕದ ಏಕೀಕರಣ ಮಾಡುವ ಮಹತ್ಕಾರ್ಯ ಮಾಡಿದ್ದರು. ತಮ್ಮ ಬಹುಮುಖ ವ್ಯಕ್ತಿತ್ವದ ಮೂಲಕ ಕನ್ನಡಿಗರನ್ನು ಒಂದುಗೂಡಿಸುವ ಕೆಲಸ ಮಾಡಿದ್ದಾರೆ ಎಂದು ತಿಳಿಸಿದರು.
ನಗರ ಪಾಲಿಕೆ ಮಾಜಿ ಸದಸ್ಯರಾದ ಮಾ ವಿ ರಾಮ್ ಪ್ರಸಾದ್ ಮಾತನಾಡಿ ಕನ್ನಡದ ಮಹಾನ್ ಚೇತನ ,ಕನ್ನಡ ಕನ್ನಡಿಗ ಕರ್ನಾಟಕ ಇರುವತನಕ ಮರೆಯದ ಮರೆಯಲಾಗದ ವ್ಯಕ್ತಿತ್ವ ,25ಕ್ಕೂ ಹೆಚ್ಚು ಕೃತಿಗಳನ್ನು ರಚನೆ ಮಾಡಿದ ಆಲೂರು ವೆಂಕಟರಾಯರು ಬಾಲಗಂಗಾಧರ ತಿಲಕರ ಗೀತಾ ರಹಸ್ಯವನ್ನ ಕನ್ನಡಕ್ಕೆ ಅನುವಾದಿಸಿ ಕನ್ನಡ ಸಾಹಿತ್ಯಕ್ಕೆ ಘನತೆ ಗೌರವ ತಂದುಕೊಟ್ಟವರು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೆ ಆರ್ ಬ್ಯಾಂಕ್ ಅಧ್ಯಕ್ಷರಾದ ಬಸವರಾಜ್ ಬಸಪ್ಪ, ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದ ಅಧ್ಯಕ್ಷರಾದ ಸಿ ಎಸ್ ಚಂದ್ರಶೇಖರ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೆಎಂಪಿ ಕೆ ಟ್ರಸ್ಟ್ ಅಧ್ಯಕ್ಷರಾದ ವಿಕ್ರಂ ಅಯ್ಯಂಗಾರ್, ಜಿ ರಾಘವೇಂದ್ರ, ಎಸ್ ಎನ್ ರಾಜೇಶ್, ಮಿರ್ಲೆ ಪನೀಶ್, ಸುಚಿಂದ್ರ,
ಚಕ್ರಪಾಣಿ,ರಾಘವೇಂದ್ರ,
ಪುರುಷೋತ್ತಮ್, ಸದಾಶಿವ ಮತ್ತಿತರರು ಹಾಜರಿದ್ದರು.