ಮೈಸೂರು: ಮೈಸೂರಿನ ಕೆಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ಪದಾಧಿಕಾರಿಗಳು ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿಗಳಾದ ಡಾ.ವೀರೇಂದ್ರ ಹೆಗಡೆ ಅವರನ್ನು ಭೇಟಿ ಮಾಡಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಅವರ ಪಟ್ಟಾಭಿಷೇಕದ 58ನೇ ವರ್ದಂತೋತ್ಸವದ ಪ್ರಯುಕ್ತ ಅವರಿಗೆ ಕೆಎಂ ಪಿ ಕೆ ಟ್ರಸ್ಟ್ ಪದಾಧಿಕಾರಿಗಳು
ಶುಭಾಶಕೋರಿದರು.
ನಂತರ ಹೆಗಡೆ ಅವರ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಜಿ ರಾಘವೇಂದ್ರ, ಕಡಕೋಳ ಜಗದೀಶ್, ಎಸ್ ಎನ್ ರಾಜೇಶ್, ಹರೀಶ್ ನಾಯ್ಡು, ಮಹೇಶ್ ಕುಮಾರ್ ಹಾಗೂ ಟ್ರಸ್ಟ್ ನ ಇತರ ಪದಾಧಿಕಾರಿಗಳು ಹಾಜರಿದ್ದರು.

