ಹುಣಸೂರು: ಕರ್ನಾಟಕ ರಾಜ್ಯ ಪ್ರಜಾ ಪಾರ್ಟಿ ರೈತ ಪರ್ವದ ವತಿಯಿಂದ ಹೊನ್ನಿಕೊಪ್ಪಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ಮಾರ್ಟ್ ಟಿವಿಯನ್ನು ಕೊಡುಗೆಯಾಗಿ ನೀಡಲಾಯಿತು.
79 ನೆ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ
ಕೆಪಿಪಿ ರೈತಪರ್ವ ರಾಜ್ಯಾಧ್ಯಕ್ಷ ಶಿವಣ್ಣ ಅವರ ನೇತೃತ್ವದಲ್ಲಿ ಸುಮಾರು 30 ಸಾವಿರ ರೂ ಮೌಲ್ಯದ ಟಿವಿಯನ್ನು ಮಕ್ಕಳ ಶೈಕ್ಷಣಿಕ ಉದ್ದೇಶಕ್ಕಾಗಿ ಕೊಡುಗೆಯಾಗಿ ನೀಡಿ ಮಾದರಿಯಾಗಿದ್ದಾರೆ.
ಈ ವೇಳೆ ತಾಲೂಕು ಪ್ರಜಾ ಪಾರ್ಟಿ ರೈತ ಪರ್ವ ಅಧ್ಯಕ್ಷ ಚೆಲುವರಾಜು, ಶಾಲಾ ಎಸ್ಡಿಎಂಸಿ ಅಧ್ಯಕ್ಷ ಸಿದ್ದರಾಜು, ಉಪಾಧ್ಯಕ್ಷೆ ಪಾರ್ವತಿ, ಶಾಲೆಯ ಮುಖ್ಯ ಶಿಕ್ಷಕರಾದ ಎನ್ ಕೆ ರಮೇಶ್, ಶಾಲೆಯ ಸಹ ಶಿಕ್ಷಕರಾದ ಗಿರೀಶ್ ಕುಮಾರ್ ಕೆ.ಎಸ್, ರವಿಕುಮಾರ್, ಕುಮಾರಿ ರೇಖಾ ಹಾಗೂ ಪೋಷಕರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶೈಕ್ಷಣಿಕ ಉದ್ದೇಶಕ್ಕಾಗಿ ನೀಡಿರುವ ಟಿವಿಯನ್ನು ಪಡೆದು ಪ್ರಜಾ ಪಾರ್ಟಿ ರಾಜ್ಯ ಅಧ್ಯಕ್ಷ ಶಿವಣ್ಣ ಹಾಗೂ ತಾ.ಅಧ್ಯಕ್ಷ ಚೆಲುವ ರಾಜು ಅವರಿಗೆ ಶಾಲೆಯ ಪರವಾಗಿ ಅಭಿನಂದಿಸಲಾಯಿತು.