ಕೆಆರ್ ಪೊಲೀಸ್ ಠಾಣೆಯಲ್ಲಿಕೃಷ್ಣ ಜನ್ಮಾಷ್ಟಮಿ

Spread the love

ಮೈಸೂರು: ಮೈಸೂರಿನ ಅಗ್ರಹಾರದಲ್ಲಿರುವ ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು.

ಠಾಣೆಯ ವೃತ್ತ ನಿರೀಕ್ಷಕರಾದ
ಧನರಾಜ್ ನೇತೃತ್ವದಲ್ಲಿ ಸ್ಥಳೀಯ ನಾಗರಿಕರ ಜೊತೆ ಸೇರಿ ಠಾಣೆಯಲ್ಲಿರುವ ಶ್ರೀ ಕೃಷ್ಣ ಪರಮಾತ್ಮನ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು.

ನಂತರ ಠಾಣೆಯ ಸಿಬ್ಬಂದಿಗಳು ಮತ್ತಿತರರಿಗೆ ಪ್ರಸಾದ ವ್ಯವಸ್ಥೆ ಮಾಡಿಸಲಾಯಿತು.

ಈ ಸಂದರ್ಭದಲ್ಲಿ ಸಬ್ ಇನ್ಸ್ಪೆಕ್ಟರ್ ವಿನೋದ್,ಮುಖ್ಯ ಪೇದೆ ಶ್ರೀನಿವಾಸ್ ಪ್ರಸಾದ್, ರಾಜಶೇಖರ್, ಅರುಣ್ ಕುಮಾರ್ ಮತ್ತು ಸಿಬ್ಬಂದಿ ವರ್ಗದವರು ಹಾಗೂ ಸ್ಥಳೀಯ ಮುಖಂಡರಾದ ಜಿ ರಾಘವೇಂದ್ರ, ನಜರ್ಬಾದ್ ನಟರಾಜ್,ರಮೇಶ್ ರಾಮಪ್ಪ, ಹರೀಶ್ ನಾಯ್ಡು, ರವಿಚಂದ್ರ,ರುದ್ರ ಮೂರ್ತಿ, ನಾಗೇಶ್, ಎಸ್.ಎನ್ ರಾಜೇಶ್, ರಾಕೇಶ್ ಮತ್ತಿತರರು ಹಾಜರಿದ್ದರು.