ಬೆಂಗಳೂರು: ಕರ್ನಾಟಕ ಮೂಲಸೌಕರ್ಯ ಅಭಿವದ್ಧಿ ನಿಗಮದ ಕೊಪ್ಪಳ ವಿಭಾಗದಲ್ಲಿ 93ಕ್ಕೂ ಹೆಚ್ಚು ಕಾಮಗಾರಿಗಳ ಹೆಸರಿನಲ್ಲಿ ಬೋಗಸ್ ಬಿಲ್ ಸೃಷ್ಟಿಸಿ 62 ಕೋಟಿ ರೂಪಾಯಿ ಗೋಲ್ಮಾಲ್ ನಡೆದಿರುವ ಹಗರಣ ಬೆಳಕಿಗೆ ಬಂದಿದ್ದು ಕಾಂಗ್ರೆಸ್ ಸರ್ಕಾರದ ಮತ್ತೊಂದು ಭ್ರಷ್ಟಾಚಾರ ಬಯಲಿಗೆ ಬಂದಿದೆ ಎಂದು ಆರ್.ಅಶೋಕ್ ದೂರಿದ್ದಾರೆ.
ಸ್ವಾಮಿ ಸಿಎಂ ಸಿದ್ದರಾಮಯ್ಯ ನವರೇ, ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ನಿಮ್ಮ ಸರ್ಕಾರದಲ್ಲಿ ಭ್ರಷ್ಟಾಚಾರ, ಅಕ್ರಮ, ಲೂಟಿ, ಅವ್ಯವಹಾರ ನಡೆಯದ ಒಂದಾದರೂ ಇಲಾಖೆ, ನಿಗಮ, ಮಂಡಳಿ ಇದೆಯೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಾರವಾಗಿ ಪ್ರಶ್ನಿಸಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮ ಆಯ್ತು ಮೂಡಾ ಆಯ್ತು, ಈಗ ಕೆಆರ್ ಐಡಿಎಲ್ ನಲ್ಲಿ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ನಿಮ್ಮ ಸರ್ಕಾರಕ್ಕೆ ಕಿಂಚಿತ್ತಾದರೂ ನಾಚಿಕೆ, ಮಾನ, ಮರ್ಯಾದೆ ಇದ್ದರೆ ಈ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಿ ಎಂದು ಅವರು ಟ್ವೀಟ್ ಮಾಡಿ ಒತ್ತಾಯಿಸಿದ್ದಾರೆ