ಮಂಡ್ಯ: ಜಿಲ್ಲೆಯ ಇತಿಹಾಸ ಪ್ರಸಿದ್ಧ
ಕೆ.ಆರ್.ಎಸ್.ನಲ್ಲಿ ಮತ್ತೆ ಭದ್ರತಾ ಲೋಪದ ಕೂಗು ಕೇಳಿ ಬಂದಿದೆ.
ಪದೇ ಪದೇ ಭದ್ರತಾ ಲೋಪವಾದರೂ ಸಂಬಧಪಟ್ಟ ಅಧಿಕಾರಿಗಳು ಏನೂ ಆಗಿಯೇ ಇಲ್ಲ ಎಂಬಂತೆ ವರ್ತಿಸುತ್ತಿದ್ದಾರೆ.
ವಿಶ್ವವಿಖ್ಯಾತ ಬೃಂದಾವನ ಗಾರ್ಡನ್ ನ ಫುಟ್ ಪಾತ್ ನಲ್ಲಿ ರಾಜಾರೋಷವಾಗಿ ಸೈಕ್ಲಿಂಗ್ ಮಾಡಿರುವ ದೃಶ್ಯ ವೈರಲ್ ಆಗಿದೆ.
ಮುಖ್ಯ ಧ್ವಾರದ ಮುಂದೆ ಫೋಟೋಗೆ ಮೂವರು ಪೋಸ್ ಕೊಟ್ಟಿದ್ದಾರೆ. ಕಾವೇರಿ ಆರತಿ ನಡೆದ ಸ್ಥಳದಲ್ಲಿ ಶೂ ಹಾಕಿ ಸೈಕ್ಲಿಂಗ್ ಮಾಡಿದ್ದಾರೆ.
ಸಾಮಾನ್ಯ ಜನರಿಗೆ ಒಂದು, ಪ್ರಭಾವಿಗಳಿಗೆ ಮತ್ತೊಂದು ಕಾನೂನು ಎಂಬಂತಾಗಿದೆ, ಜನ ಇದನ್ನು ಕಾರವಾಗಿ ಪ್ರಶ್ನಿಸಿದ್ದಾರೆ.
ಕೆ ಆರ್ ಎಸ್ ಭದ್ರತೆಯ ಜವಾಬ್ದಾರಿ ಹೊತ್ತ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ, ಕಾವೇರಿ ನೀರಾವರಿ ನಿಗಮ, ಪೊಲೀಸ್ ಇಲಾಖೆ, ಮಂಡ್ಯ ಜಿಲ್ಲಾಡಳಿತದ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ.

