ಡಾ.ಬಾಬು ಜಗಜೀವನರಾಂ ಅಧ್ಯಯನ ಪೀಠದಿಂದ ಬಾಬು ಸ್ಮರಣೆ

Spread the love

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಡಾ. ಬಾಬು ಜಗಜೀವನ ರಾಮ್ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದಿಂದ ಭಾನುವಾರ ಡಾ. ಬಾಬು ಜಗಜೀವನರಾಮ್ ಅವರ 39ನೇ ಪುಣ್ಯಸ್ಮರಣೆ ಹಮ್ಮಿಕೊಳ್ಳಲಾಯಿತು.

ಇಂದು ಬೆಳಿಗ್ಗೆ 9 ಗಂಟೆಗೆ ರೈಲ್ವೆ ನಿಲ್ದಾಣದ ಬಳಿ ಇರುವ ಡಾ. ಬಾಬು ಜಗಜೀವನರಾಮ್ ಅವರ ಪುತ್ತಳಿಗೆ ಮಾಲಾರ್ಪಣೆ ಮಾಡಲಾಯಿತು.

ನಂತರ ವಿಶ್ವವಿದ್ಯಾನಿಲಯದ ಡಾ. ಬಾಬು ಜಗಜೀವನ ರಾಮ್ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದಲ್ಲಿ ಸಮಾರಂಭ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಡೀನ್ ಅಧ್ಯಕ್ಷತೆಯನ್ನು ಪ್ರೊ. ರಾಮನಾಥಮ್ ನಾಯ್ಡು ಅವರು ವಹಿಸಿದ್ದರು.

ಅಧ್ಯಯನ ಕೇಂದ್ರಗಳ ಡೀನ್ ಡಾ.ಎನ್.ಆರ್. ಚಂದ್ರೇಗೌಡರು ಡಾ. ಬಾಬು ಜಗಜೀವನ ರಾಮ್ ರವರ ಬಾಲ್ಯ ಜೀವನ ಮತ್ತು ರಾಜಕೀಯ ಸೂಕ್ಷ್ಮತೆ ಮತ್ತು ಸಾಧನೆ ಬಗ್ಗೆ ತಿಳಿಸಿ ಕೊಟ್ಟರು.

ಡಾ. ಬಾಬು ಜಗಜೀವನರಾಮ್ ಪೀಠದ ನಿರ್ದೇಶಕರಾದ ಡಾ. ಆರ್. ಶರಣಮ್ಮ ಪ್ರಾಸ್ತಾವಿಕ ಭಾಷಣ ಮಾಡಿದರು.

ಡಾ. ಜೆ.ಎಸ್. ಚಂದ್ರಶೇಖರ್ ಹಾಗೂ ಕ.ರಾ.ಮು.ವಿ.ಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.