ಮೈಸೂರು: ದಸರಾ ಅಂಗವಾಗಿ ನಗರದಲ್ಲಿರುವ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಆನೆಗಳು ಮತ್ತು ಕುದುರೆಗಳಿಗೆ ಕುಶಾಲತೋಪು ಪೂರ್ವಭಾವಿ ಅಭ್ಯಾಸವನ್ನು ನಡೆಸಲಾಯಿತು.

ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಗಜಪಡೆಗೆ ಇಂದು 21 ಕುಶಾಲ ತೋಪು ಹಾರಿಸುವ ಮೂಲಕ ಮಾಡಲಾಯಿತು.
ಮೈಸೂರು ದಸರಾದ ಆಕರ್ಷಣೆಯ ಜಂಬುಸವಾರಿ ದಿನದಂದು ಅರಮನೆ ಆವರಣದಲ್ಲಿ ನಾಡ ಅದಿದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮುನ್ನ 21 ಕುಶಾಲತೋಪನ್ನು ಹಾರಿಸಲಾಗುತ್ತದೆ. ಆನೆಗಳು ಕುದುರೆಗಳು ಈ ವೇಳೆ ಹೆದರಬಾರದು ಎಂಬ ಹಿನ್ನೆಲೆಯಲ್ಲಿ ಗುರುವಾರ ಕುಶಾಲತೋಪು ಅಭ್ಯಾಸವನ್ನು ನಡೆಸಲಾಯಿತು.

ಮೊದಲ ಸುತ್ತಿನ ಕುಶಾಲತೋಪು ಅಭ್ಯಾಸವನ್ನು ನಡೆಸಲಾಗಿದೆ. ಇನ್ನು ಎರಡು ಬಾರಿ ಅಂದರೆ ಸೆ. 29 ಹಾಗೂ ಅ. 1ರಂದು ಕುಶಾಲ ತೋಪು ಅಭ್ಯಾಸವನ್ನು ನಡೆಸಲಾಗುವುದು.
ಕುಶಾಲು ತೋಪು ಅಭ್ಯಾಸಕ್ಕೆ ಬಂದ ಆನೆಗಳಿಗೆ ಮೈಸೂರು ವಸ್ತು ಪ್ರದರ್ಶನ ಪ್ರಾಧಿಕಾರದ ವತಿಯಿಂದ ಭವ್ಯ ಸ್ವಾಗತ ಕೋರಲಾಯಿತು.